Homeಮುಖಪುಟಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

- Advertisement -
- Advertisement -

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದ್ದು, ಇದರ ಬೆನ್ನಲ್ಲೇ ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ರಾಜಕೀಯಕ್ಕೆ ಬರುವ ಮುನ್ನವೇ ತಾವೊಬ್ಬ ಕೃಷಿಕರಾಗಿದ್ದರಿಂದ ಈ ಸಬ್ಸಿಡಿ ಪಡೆದುಕೊಳ್ಳುವಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಚೌಧರಿ ಸಮರ್ಥಿಸಿಕೊಂಡಿದ್ದಾರೆ. ನಾನೊಬ್ಬ ರೈತ ಮತ್ತು ಬಾಲ್ಯದಿಂದಲೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ” ಎಂದು ಎಎನ್‌ಐ (ANI) ಸುದ್ದಿ ಸಂಸ್ಥೆಗೆ ತಿಳಿಸಿದ ಚೌಧರಿ, ತಾವು 2018 ರಲ್ಲೇ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಯೋಜನೆಗಾಗಿ ಪಡೆದ ಸಾಲ ಮತ್ತು ಸಬ್ಸಿಡಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿರುವುದಾಗಿ ಹೇಳಿದ್ದಾರೆ.

ಇದರ ಜೊತೆಗೆ, ತಾವೊಬ್ಬ ಬಿಜೆಪಿ ನಾಯಕರಾಗಿದ್ದರೂ ತಮ್ಮ ಜಮೀನನ್ನು ಇತರ ರೈತರಿಗೆ ಆಧುನಿಕ ಕೃಷಿ ಪದ್ಧತಿ ಹಾಗೂ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲು ಬಳಸುತ್ತಿರುವುದಾಗಿ ತಿಳಿಸಿದ ಅವರು, “ಸಾವಿರಾರು ರೈತರು ಪಾಲಿಹೌಸ್‌ಗಳನ್ನು ನಿರ್ಮಿಸಿಕೊಂಡು ಸಬ್ಸಿಡಿ ಪಡೆಯುತ್ತಾರೆ, ಹಾಗೆಯೇ ನಾನೂ ಕೂಡ ಪಡೆದಿದ್ದೇನೆ. ಸ್ಥಳೀಯ ಅಧಿಕಾರಿಗಳು ಜಮೀನಿಗೆ ಬಂದು ಯೋಜನೆಯ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ರಾಷ್ಟ್ರೀಯ ತೋಟಗಾರಿಕಾ ಮಂಡಳಿ (NHB) ಉಸ್ತುವಾರಿ ಇಲಾಖೆಯ ಯೋಜನೆಯಡಿಯಲ್ಲೇ ಚೌಧರಿ ಸಬ್ಸಿಡಿ ಪಡೆದಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿದೆ. ವಿಶೇಷವೆಂದರೆ, ಸಚಿವ ಸ್ಥಾನದ ಕಾರಣದಿಂದಾಗಿ ಚೌಧರಿ ಅವರೇ ಈ ಮಂಡಳಿಯ ಪದನಿಮಿತ್ತ ಉಪಾಧ್ಯಕ್ಷರಾಗಿದ್ದಾರೆ.

ಆಯ್ದ ತರಕಾರಿಗಳು ಮತ್ತು ಹೂವುಗಳ ದೊಡ್ಡ ಪ್ರಮಾಣದ ವಾಣಿಜ್ಯ ಬೇಸಾಯವನ್ನು ಉತ್ತೇಜಿಸಲು 2014-15 ರಲ್ಲಿ ಪ್ರಾರಂಭಿಸಲಾದ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್’ (MIDH) ಅಡಿಯಲ್ಲಿ ಈ ಸಬ್ಸಿಡಿಯನ್ನು ಮಂಜೂರು ಮಾಡಲಾಗಿದೆ.

ರಾಜಸ್ಥಾನದ ದೀದ್ವಾನಾ-ಕುಚಾಮನ್ ಜಿಲ್ಲೆಯ ಪೀಹ್ ಗ್ರಾಮದಲ್ಲಿರುವ ಚೌದರಿ ಅವರು ಕಲ್ಲಿನ ಕೌಂಪೌಂಡ್‌, ಮುಳ್ಳುತಂತಿ ಬೇಲಿಗಳು, ಕೃತಕ ಹೊಂಡಗಳು ಹಾಗೂ ನಾಲ್ಕು ದೊಡ್ಡ ಪಾಲಿಹೌಸ್‌ಗಳಿರುವ 16,592 ಚದರ ಮೀಟರ್‌ ವಿಸ್ತೀರ್ಣದ ಜಮೀನು ಹೊಂದಿದ್ದಾರೆ. ಈ ವಿಶಾಲವಾದ ಕೃಷಿ ಭೂಮಿಯಲ್ಲಿ ಬಿಳಿ ಬಣ್ಣದ ಅಧಿಕೃತ ನಾಮಫಲಕವೊಂದನ್ನು ಅಳವಡಿಸಲಾಗಿದೆ. ಅದರಲ್ಲಿ “ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ಸಹಾಯ ಪಡೆದಿದೆ” ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಫಲಾನುಭವಿಯ ಹೆಸರು ‘ಭಗೀರಥ್ ಚೌಧರಿ’ ಎಂದಿದ್ದು, 50%ರಷ್ಟು ಅಂದರೆ 99,60,000 ರೂ. ಸಬ್ಸಿಡಿ ಮೊತ್ತವನ್ನು ಉಲ್ಲೇಖಿಸಲಾಗಿದೆ.

NHB ನಿರ್ವಹಿಸುವ ಈ ಯೋಜನೆಯು ಸೌತೆಕಾಯಿ, ದಪ್ಪಮೆಣಸಿನಕಾಯಿ (Capsicum), ಟೊಮೆಟೊ ಮತ್ತು ಕೆಲವು ಹೂವುಗಳ ಕೃಷಿಗಾಗಿ ಒಟ್ಟು ಯೋಜನಾ ವೆಚ್ಚದ ಶೇ. 50 ರಷ್ಟು ಸಬ್ಸಿಡಿಯನ್ನು ನೀಡುತ್ತದೆ. ಇದರ ಗರಿಷ್ಠ ಮಿತಿ ಒಂದು ಕುಟುಂಬಕ್ಕೆ 1 ಕೋಟಿ ರೂಪಾಯಿ ಆಗಿದೆ.

ಎನ್‌ಹೆಚ್‌ಬಿ (NHB) ವೆಬ್‌ಸೈಟ್ ಪ್ರಕಾರ, ಈ ಮಂಡಳಿಗೆ ಕೇಂದ್ರ ಕೃಷಿ ಸಚಿವರು ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಕೃಷಿ ಖಾತೆ ರಾಜ್ಯ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿರುತ್ತಾರೆ. ಆದರೆ, ಅಧಿಕೃತ ದಾಖಲೆಗಳ ಪ್ರಕಾರ, ಸಬ್ಸಿಡಿ ಪ್ರಸ್ತಾಪಗಳನ್ನು ಪ್ರತ್ಯೇಕವಾದ ‘NHB ಪ್ರಾಜೆಕ್ಟ್ ಅಪ್ರೂವಲ್ ಕಮಿಟಿ’ ಅಂಗೀಕರಿಸುತ್ತದೆ. ಈ ಸಮಿತಿಯಲ್ಲಿ ಮಂಡಳಿಯ ಅಧ್ಯಕ್ಷರಾಗಲಿ ಅಥವಾ ಉಪಾಧ್ಯಕ್ಷರಾಗಲಿ ಸದಸ್ಯರಾಗಿರುವುದಿಲ್ಲ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...