Homeಮುಖಪುಟಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

- Advertisement -
- Advertisement -

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಮಂಗಳವಾರ (ನವೆಂಬರ್ 25) ಹೇಳಿದ್ದಾರೆ.

ಸಂಸದರ ನಿಧಿ, ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಹಣ ಲಭ್ಯವಿದೆ ಎಂದು ಬಂಡಿ ಸಂಜಯ್ ತಿಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ, ಪ್ರತಿಯೊಬ್ಬ ಸಂಸದರು ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವರ್ಷಕ್ಕೆ 5 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಫಾರಸು ಮಾಡುವ ಹಕ್ಕನ್ನು ಹೊಂದಿರುತ್ತಾರೆ.

ಸಿಎಸ್ಆರ್ ನಿಧಿಗಳ ಮೂಲಕ ನಾವು ಕೋಟ್ಯಂತರ ರೂಪಾಯಿಗಳನ್ನು ಹೇಗೆ ಗಳಿಸಿದ್ದೇವೆ ಮತ್ತು ಶಿಕ್ಷಣ, ಆರೋಗ್ಯ ರಕ್ಷಣೆಯನ್ನು ಸುಧಾರಿಸುವಲ್ಲಿ ಹೇಗೆ ಹೂಡಿಕೆ ಮಾಡಿದ್ದೇವೆ ಎಂದು ನಿಮಗೆ ಈಗಾಗಲೇ ಗೊತ್ತಿದೆ ಎಂದು ಬಂಡಿ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಕೇಂದ್ರ ಸಚಿವನಾಗಿ ಪಂಚಾಯತ್ ಅಭಿವೃದ್ಧಿಯನ್ನು ಬಲಪಡಿಸಲು ನಾನು ಇನ್ನೂ ಹೆಚ್ಚಿನ ಕೇಂದ್ರ ನಿಧಿಗಳನ್ನು ತರುತ್ತೇನೆ ಎಂದಿದ್ದಾರೆ.

ಗ್ರಾಮಗಳ ಅಭಿವೃದ್ಧಿಗಾಗಿ ನಾನು ನೇರವಾಗಿ 10 ಲಕ್ಷ ರೂಪಾಯಿ ನೀಡುತ್ತೇನೆ. ಇದರಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ, ಯಾವುದೇ ನೆಪ ಹೇಳುವುದಿಲ್ಲ ಎಂದು ಬಿಜೆಪಿ ನಾಯಕ ಭರವಸೆ ನೀಡಿದ್ದಾರೆ.

ಡಿಸೆಂಬರ್ ಮಧ್ಯದಲ್ಲಿ ತೆಲಂಗಾಣದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.

ತೆಲಂಗಾಣದ ಈ ಹಿಂದಿನ ಆಡಳಿತ ಪಕ್ಷ ಬಿಆರ್‌ಎಸ್‌ ಸರ್ವಾನುಮತದಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಂಚಾಯತ್‌ಗಳಿಗೆ 5 ಲಕ್ಷ ರೂ.ಗಳ ಭರವಸೆ ನೀಡಿತ್ತು ಎಂದು ಬಂಡಿ ಸಂಜಯ್ ನೆನಪಿಸಿದ್ದಾರೆ.

ಕರೀಂನಗರ ಲೋಕಸಭಾ ಕ್ಷೇತ್ರ ಪ್ರದೇಶದ ಸುಮಾರು 70 ಹಳ್ಳಿಗಳು ಬಿಆರ್‌ಎಸ್ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದವು. ಆದರೆ, ಅವರ ಸರ್ಕಾರ ಬಂದು ಐದು ವರ್ಷಗಳ ನಂತರವೂ ಕೆಸಿಆರ್ ಸರ್ಕಾರ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಇದೇ ರೀತಿಯ ಭರವಸೆಗಳನ್ನು ನೀಡಿತ್ತು. ಸರ್ವಾನುಮತದ ಆಯ್ಕೆಯ ಹೆಸರಿನಲ್ಲಿ ಜನರನ್ನು ವಂಚಿಸಿದೆ ಎಂದು ಬಂಡಿ ಸಂಜಯ್ ದೂರಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಅನ್ನು ನಂಬಿದವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದರು. ಎರಡೂ ಪಕ್ಷಗಳು ಈಗ ಅದೇ ವಂಚನೆಯನ್ನು ಪುನರಾವರ್ತಿಸಲು ತಯಾರಿ ನಡೆಸುತ್ತಿವೆ. ಬಿಜೆಪಿ ಮಾತ್ರ ಕೊಟ್ಟ ಭರವಸೆಯಂತೆ ಹಣ ತರಲಿದೆ. ಕಾಂಗ್ರೆಸ್ ಅಥವಾ ಬಿಆರ್‌ಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದರೆ, ಹೊಸ ನಿಧಿಗಳು ಬರುವುದಿಲ್ಲ ಮತ್ತು ಕೇಂದ್ರದ ನಿಧಿಗಳು ಕೂಡ ಬೇರೆಡೆಗೆ ಹೋಗಬಹುದು. ಆದ್ದರಿಂದ ಅವರ ತಂತ್ರ, ಪ್ರಚೋದನೆಗಳಿಗೆ ಬಲಿಯಾಗಬೇಡಿ ಎಂದು ಬಂಡಿ ಸಂಜಯ್ ಹೇಳಿದ್ದಾರೆ.

ಡಿಸೆಂಬರ್ 2ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ಈ ಪ್ರದೇಶದ ಅಭಿವೃದ್ದಿಗೆ ಹಣ ಸಿಗಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ನವೆಂಬರ್ 21) ಮಾಲೆಗಾಂವ್‌ನಲ್ಲಿ ಮತದಾರರಿಗೆ ಹೇಳಿದ್ದರು. ಈ ಬೆನ್ನಲ್ಲೇ ತೆಲಂಗಾಣದ ಬಿಜೆಪಿ ನಾಯಕ ಅದೇ ರೀತಿಯ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...