Homeಮುಖಪುಟಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

ಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

- Advertisement -
- Advertisement -

‘ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತೀರಿ’ ಎಂದು ಬಿಹಾರ ರಾಜ್ಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ತಮ್ಮ ಹೇಳಿಕೆಗಳನ್ನು ಹಿಂಪಡೆದಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಪಕ್ಷದ ಸದಸ್ಯರಾದ ಮನೋಜ್ ಝಾ ರವರು ಮಾತನಾಡುತ್ತಿದ್ದ ವೇಳೆ ಅದನ್ನು ತಡೆದು ಪಿಯೂಶ್ ಗೋಯಲ್ “ಇವರು ಈ ರೀತಿ ಮಾತನಾಡಿದರೆ, ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತಾರೆ” ಎಂದು ಹೇಳಿದ್ದರು.

ಇದರಿಂದ ಕೆರಳಿದ ಬಿಹಾರದ ಸದಸ್ಯರು ಬಿಹಾರ ರಾಜ್ಯವನ್ನು ಅವಹೇಳನಕಾರಿ ಪದವಾಗಿ ಬಳಸುವ ಮೂಲಕ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಬಿಹಾರ ರಾಜ್ಯವನ್ನು ಅವಮಾನಿಸುವ ಪಿಯೂಶ್ ಗೋಯಲ್‌ ಅವರ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಹಲವು ರಾಜ್ಯಸಭಾ ಸದಸ್ಯರು ಇಂದು ಪ್ರತಿಭಟನೆ ನಡೆಸಿದ್ದರು.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆ ವಿಡಿಯೋವನ್ನು ಹಂಚಿಕೊಂಡು, “ನೋಡಿ ಕೇಂದ್ರ ಸಚಿವರ ಅವಿವೇಕತನದಿಂದ ಮತ್ತು ಅಹಂಕಾರದಿಂದ ಬಿಹಾರ ಮತ್ತು ಅಲ್ಲಿನ ಜನರನ್ನು ಹಂಗಿಸುತ್ತಿದ್ದಾರೆ. 2.5 ಲಕ್ಷ ಕೋಟಿ ರೂಗಳ ಯೋಜನೆಗಳನ್ನು ಅವರ ಸ್ವಂತ ರಾಜ್ಯ ಮಹಾರಾಷ್ಟ್ರದಿಂದ ಗುಜರಾತ್‌ಗೆ ತಗೆದುಕೊಂಡು ಹೋದಾಗಲೂ ಅವರು ಒಂದು ಮಾತು ಆಡಲಿಲ್ಲ. ಇದು ಅವರ ನಿಲುವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮನೋಜ್ ಝಾರವರು ಉಪರಾಷ್ಟ್ರಪತಿ ಜಗದೀಪ್ ಧಂಕರ್‌ರವರಿಗೆ ಪತ್ರ ಬರೆದು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಮತ್ತು ಶ್ರೇಷ್ಠತೆಯ ವ್ಯಸನದಿಂದ ಕೂಡಿರುವ ಆ ಹೇಳಿಕೆಯನ್ನು ಕಡತದಿಂದ ತೆಗೆಯಬೇಕೆಂದು ಒತ್ತಾಯಿಸಿದ್ದರು.

ಈ ಅಹಂಕಾರಿ ಜನರು ಬಿಹಾರದ ಜನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಕಾಣುತ್ತಾರೆ. ಹಾಗಾಗಿ ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಾರೆ. ಭಾರತದ ಎಲ್ಲಾ ರಾಜ್ಯಗಳನ್ನು ಕೇಂದ್ರ ಸರ್ಕಾರ ಸಮಾನವಾಗಿ ಪರಿಗಣಿಸಬೇಕು ಎಂದು ಕಿಡಿಕಾರಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, “ಬಿಹಾರ ರಾಜ್ಯವನ್ನು ಅಥವಾ ಬಿಹಾರದ ಜನರನ್ನು ಅವಮಾನಿಸುವ ಯಾವ ಉದ್ದೇಶವು ನನಗಿಲ್ಲ. ಅದು ಯಾರ ಭಾವನೆಗಾದರೂ ನೋವುಂಟು ಮಾಡಿದರೆ, ನಾನು ಕೂಡಲೇ ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ” ಎಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದಂತೆ 2002ರ ಮೊದಲು ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...