Homeಮುಖಪುಟಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

ಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

- Advertisement -
- Advertisement -

‘ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತೀರಿ’ ಎಂದು ಬಿಹಾರ ರಾಜ್ಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ತಮ್ಮ ಹೇಳಿಕೆಗಳನ್ನು ಹಿಂಪಡೆದಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಪಕ್ಷದ ಸದಸ್ಯರಾದ ಮನೋಜ್ ಝಾ ರವರು ಮಾತನಾಡುತ್ತಿದ್ದ ವೇಳೆ ಅದನ್ನು ತಡೆದು ಪಿಯೂಶ್ ಗೋಯಲ್ “ಇವರು ಈ ರೀತಿ ಮಾತನಾಡಿದರೆ, ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತಾರೆ” ಎಂದು ಹೇಳಿದ್ದರು.

ಇದರಿಂದ ಕೆರಳಿದ ಬಿಹಾರದ ಸದಸ್ಯರು ಬಿಹಾರ ರಾಜ್ಯವನ್ನು ಅವಹೇಳನಕಾರಿ ಪದವಾಗಿ ಬಳಸುವ ಮೂಲಕ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಬಿಹಾರ ರಾಜ್ಯವನ್ನು ಅವಮಾನಿಸುವ ಪಿಯೂಶ್ ಗೋಯಲ್‌ ಅವರ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಹಲವು ರಾಜ್ಯಸಭಾ ಸದಸ್ಯರು ಇಂದು ಪ್ರತಿಭಟನೆ ನಡೆಸಿದ್ದರು.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆ ವಿಡಿಯೋವನ್ನು ಹಂಚಿಕೊಂಡು, “ನೋಡಿ ಕೇಂದ್ರ ಸಚಿವರ ಅವಿವೇಕತನದಿಂದ ಮತ್ತು ಅಹಂಕಾರದಿಂದ ಬಿಹಾರ ಮತ್ತು ಅಲ್ಲಿನ ಜನರನ್ನು ಹಂಗಿಸುತ್ತಿದ್ದಾರೆ. 2.5 ಲಕ್ಷ ಕೋಟಿ ರೂಗಳ ಯೋಜನೆಗಳನ್ನು ಅವರ ಸ್ವಂತ ರಾಜ್ಯ ಮಹಾರಾಷ್ಟ್ರದಿಂದ ಗುಜರಾತ್‌ಗೆ ತಗೆದುಕೊಂಡು ಹೋದಾಗಲೂ ಅವರು ಒಂದು ಮಾತು ಆಡಲಿಲ್ಲ. ಇದು ಅವರ ನಿಲುವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮನೋಜ್ ಝಾರವರು ಉಪರಾಷ್ಟ್ರಪತಿ ಜಗದೀಪ್ ಧಂಕರ್‌ರವರಿಗೆ ಪತ್ರ ಬರೆದು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಮತ್ತು ಶ್ರೇಷ್ಠತೆಯ ವ್ಯಸನದಿಂದ ಕೂಡಿರುವ ಆ ಹೇಳಿಕೆಯನ್ನು ಕಡತದಿಂದ ತೆಗೆಯಬೇಕೆಂದು ಒತ್ತಾಯಿಸಿದ್ದರು.

ಈ ಅಹಂಕಾರಿ ಜನರು ಬಿಹಾರದ ಜನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಕಾಣುತ್ತಾರೆ. ಹಾಗಾಗಿ ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಾರೆ. ಭಾರತದ ಎಲ್ಲಾ ರಾಜ್ಯಗಳನ್ನು ಕೇಂದ್ರ ಸರ್ಕಾರ ಸಮಾನವಾಗಿ ಪರಿಗಣಿಸಬೇಕು ಎಂದು ಕಿಡಿಕಾರಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, “ಬಿಹಾರ ರಾಜ್ಯವನ್ನು ಅಥವಾ ಬಿಹಾರದ ಜನರನ್ನು ಅವಮಾನಿಸುವ ಯಾವ ಉದ್ದೇಶವು ನನಗಿಲ್ಲ. ಅದು ಯಾರ ಭಾವನೆಗಾದರೂ ನೋವುಂಟು ಮಾಡಿದರೆ, ನಾನು ಕೂಡಲೇ ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ” ಎಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದಂತೆ 2002ರ ಮೊದಲು ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...