Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...