Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...