Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....