Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...