Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...