Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...