Homeಮುಖಪುಟರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

ರಫೇಲ್ ಯುದ್ಧ ವಿಮಾನದ ಚಕ್ರಕ್ಕೆ ನಿಂಬೆಹಣ್ಣು: ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಟ್ರೋಲ್

- Advertisement -
- Advertisement -

ಭಾರತಕ್ಕೆ ಹಸ್ತಾಂತರಿಸಲಾದ 36 ರಫೇಲ್ ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆ ನೆರವೇರಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್ ಯುದ್ಧ ವಿಮಾನದ ಚಕ್ರದ ಕೆಳಗೆ ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಬಹಳಷ್ಟು ಜನ ಟ್ರೋಲ್ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕದ ಮಾಜಿ ಸಚಿವ ರೇವಣ್ಣನವರು ನಿಂಬೆಹಣ್ಣು ಇಟ್ಟುಕೊಳ್ಳತ್ತಿದ್ದನ್ನು ನೆನಪಿಸಿಕೊಳ್ಳಲಾಗಿದೆ. ನಿಂತಲ್ಲಿ, ಕುಂತಲ್ಲಿ, ಪ್ರತಿ ಕೆಲಸಕ್ಕೂ ಮೂಹೂರ್ತ ಫಿಕ್ಸ್ ಮಾಡುತ್ತಿದ್ದ ರೇವಣ್ಣನವರಿಗಿಂತ ರಾಜನಾಥ್ ಸಿಂಗ್‌ ಏನೂ ಕಡಿಮೆ ಇಲ್ಲ ಎಂದು ಹೋಲಿಕೆ ಮಾಡಲಾಗಿದೆ. ರಾಜನಾಥ್ ಸಿಂಗ್ ವಿಮಾನದ ಕೆಳಗೆ ಇಟ್ಟಿದ್ದು ನಿಂಬೆಹಣ್ಣೋ ಅಥವಾ ಕುಂಬಳಕಾಯಿಯೋ ಎಂದು ಟ್ವಿಟ್ಟಿಗರು ಪ್ರಶ್ನಿಸಿದ್ದಾರೆ.

ದುಷ್ಟ ಕಣ್ಣುಗಳಿಂದ ರಕ್ಷಿಸಿಕೊಳ್ಳಲು ಮತ್ತು ದುಷ್ಟರಿಂದ ರಕ್ಷಣೆಗಾಗಿ ನಾವು ನಿಂಬೆ ಮತ್ತು ಮೆಣಸಿನಕಾಯಿಯಂಥ ಉತ್ತಮ ತಂತ್ರಜ್ಞಾನ ಹೊಂದಿದ್ದೇವೆ ಎಂದು ಟ್ವಿಟ್ಟರ್ ನಲ್ಲಿ ತಮಾಷೆ ಮಾಡಲಾಗಿದೆ. ಮೊದಲು ದೇಶವನ್ನು ರಕ್ಷಿಸಲು ರಫೇಲ್ ಖರೀದಿ ಮಾಡಲಾಗುತ್ತಿತ್ತು. ಆದರೆ ಈಗ ರಫೇಲ್ ರಕ್ಷಣೆಗೆ ನಿಂಬೆಹಣ್ಣು ಖರೀದಿಸಬೇಕಿದೆ ಎಂದು ರಫೇಲ್ ಶಸ್ತ್ರ ಪೂಜೆಗೆ ಕುಟುಕಿದ್ದಾರೆ.

ಇವತ್ತು ಭಕ್ತರು ಯಾವ ಕೆಲಸದಲ್ಲಿ busy ಆಗಿರ್ತಾರೆ ಅಂತೀರಿ? ನೆಹರು, ಇಂದಿರಾ, ರಾಜೀವ್, ಫೈಟರ್ ಜೆಟ್ ನ ಪೂಜೆ ಮಾಡ್ತಿರೋ ಫೋಟೋ ಹುಡುಕೋದ್ರಲ್ಲಿ ಅಥ್ವಾ ಅಂಥಾದೊಂದು ಫೋಟೋ, ಫೋಟೋಶಾಪ್ ಮಾಡೋದ್ರಲ್ಲಿ.. ಎಂದು ಚಿದಂಬಂರ ನರೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

₹ 1638 ಕೋಟಿ < 2 ನಿಂಬೆಹಣ್ಣು.
ಫ್ರಾನ್ಸ್ ಏನೆಲ್ಲಾ ಉತ್ಪಾದನೆ ಮಾಡಿ ಇಡೀ ಪ್ರಪಂಚಕ್ಕೆ ರಪ್ತು ಮಾಡಬಹುದು, ಆದರೆ ಅವು ನಮ್ಮ ದೇಶದ ಬೂದು ಕುಂಬಳ ಕಾಯಿ, ನಿಂಬೆಹಣ್ಣು, ಕರಡಿ ಕೂದಲುಗಳಿಗೆ ಸಮಬಾರವು ಎಂದು ಮಹಾಂತೇಶ್‌ ದೊಡ್ಡಮನಿಯವರು ವ್ಯಂಗ್ಯವಾಡಿದ್ದಾರೆ.

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಹಿಂದೊಮ್ಮೆ ದೇವೇಗೌಡರು ಹೂ ಮುಡಿದುಕೊಂಡಿದ್ದಕ್ಕೆ ಟ್ವಿಟ್ಟರ್‌ನಲ್ಲಿ ಗೇಲಿ ಮಾಡಿದ್ದರು. ಈಗ ರಾಜ್‌ನಾಥ್‌ ಸಿಂಗ್‌ ನಿಂಬೆಹಣ್ಣು ಇಟ್ಟಿದ್ದನ್ನು ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಹಿಪಾಕ್ರಸಿಯನ್ನು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಈ ಕುರಿತು ನೂರಾರು ವ್ಯಂಗ್ಯ ಚಿತ್ರಗಳು ರಚನೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಷೇರ್‌ ಆಗಿವೆ.

ಬಹುನಿರೀಕ್ಷಿತ 36 ರಫೇಲ್ ಯುದ್ದ ವಿಮಾನವನ್ನು ದೀರ್ಘಕಾಲದ ಚರ್ಚೆಯ ಬಳಿಕ ಫ್ರಾನ್ಸ್ ಸರ್ಕಾರ, ಭಾರತಕ್ಕೆ ಔಪಚಾರಿಕವಾಗಿ ಒಂದು ಯುದ್ಧ ವಿಮಾನವನ್ನು ಹಸ್ತಾಂತರಿಸಿದೆ. ಪ್ಯಾರಿಸ್ ನ ಮೆರಿಗ್ನಾಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮಾನವನ್ನು ಹಸ್ತಾಂತರಿಸಲಾಯಿತು. ಸೆಪ್ಟೆಂಬರ್ 2016ರಲ್ಲಿ ಮಾಡಿಕೊಂಡಿದ್ದ 59 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ನಾಲ್ಕು ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...