Homeಮುಖಪುಟಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?

ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?

ಲಸಿಕೆಗಾಗಿಯೇ 2021ರ ಬಜೆಟ್ಟಿನಲ್ಲಿ 35,000 ಕೋಟಿಗಳನ್ನು ಕೇಂದ್ರ ಸರ್ಕಾರ ಎತ್ತಿಡಲಾಗಿತ್ತು...

- Advertisement -
- Advertisement -

ಕಳೆದ ಏಳು ದಿನಗಳಿಂದ ಪ್ರತಿದಿನ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆಯಾಗಿದೆ. ಪ್ರತಿದಿನ ಲೀಟರ್‌ ಮೇಲೆ ಸರಾಸರಿ 31 ಪೈಸೆಯಷ್ಟು ಬೆಲೆ ಹೆಚ್ಚಳವಾಗುತ್ತಿದ್ದು ಬೆಂಗಳೂರಿನಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 108.08ರೂ ಗೆ ತಲುಪಿದೆ. ಅದೇ ರೀತಿಯಲ್ಲಿ ಡೀಸೆಲ್ 98.89 ರೂ ತಲುಪಿದರೆ ಕರ್ನಾಟಕದ ಕೆಲವು ನಗರಗಳಲ್ಲಿ ನೂರು ರೂ ದಾಟಿದೆ. ಇದೇ ಸಂದರ್ಭದಲ್ಲಿ ಉಚಿತ ಕೊರೊನಾ ಲಸಿಕೆ ನೀಡಿದ್ದೆ ಇಂಧನ ಬೆಲೆ ಗಗನಕ್ಕೇರಲು ಕಾರಣ ಎಂದು ಕೇಂದ್ರ ಸಚಿವ ರಾಮೇಶ್ವರ್ ತೇಲಿ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅಸ್ಸಾಂನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಇಂಧನ ಬೆಲೆಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ ತೆರಿಗೆಗಳು ಹೆಚ್ಚಿವೆ. ಈ ತೆರಿಗೆಯ ಹಣವನ್ನು ಉಚಿತ ಕೋವಿಡ್ ಲಸಿಕೆ ನೀಡಲು ಸಹಾಯಧನವಾಗಿ ಬಳಸಲಾಗಿದೆ. ನೀವು ಉಚಿತ ಲಸಿಕೆ ಪಡೆದಿರಬೇಕು ಅಲ್ಲವೇ? ಅದಕ್ಕೆ ಹಣ ಎಲ್ಲಿಂದ ಬಂದಿದೆ?” ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಉಚಿತ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳು ಜಾರಿಯಲ್ಲಿರುವುದರಿಂದ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡಲಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಸಲು ಸಾಧ್ಯವಿಲ್ಲ ಎಂದಿದ್ದರು.

ಇನ್ನು ನೂತನ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಜುಲೈ 27 ರಂದು ಮಾತನಾಡಿ “2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಬಳಸಲಾಗಿದೆ” ಎಂದು ತಿಳಿಸಿದ್ದರು. ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಡೀಸೆಲ್ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್ ಆಗಿ ಒಂದು ವರ್ಷದಲ್ಲಿ 2,33,296 ಲಕ್ಷ ಕೋಟಿ ರೂ ಮತ್ತು ಪೆಟ್ರೋಲ್ ಮೇಲೆ 1,01,598 ಲಕ್ಷ ಕೋಟಿ ರೂಗಳು ಸಂಗ್ರಹ ಆಗಿದೆ ಎಂದು ಲಿಖಿತವಾಗಿ ಉತ್ತರಿಸಿದ್ದಾರೆ.

ವಾಸ್ತವವೇನು?

ಆರಂಭದಲ್ಲಿ ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ 35,000 ಕೋಟಿಗಳನ್ನು ಕೇಂದ್ರ ಸರ್ಕಾರ ಎತ್ತಿಡಲಾಗಿತ್ತು… ನಂತರ ಕೇಂದ್ರಕ್ಕೆ ಒಂದು ಡೋಸ್‌ ವ್ಯಾಕ್ಸಿನ್‌ಗೆ 150 ರೂ ಹಾಗು ರಾಜ್ಯಗಳಿಗೆ 450 ರೂ ಮತ್ತು ಖಾಸಗಿ ಆಸ್ಪತ್ರೆಗಳಿಗೆ 800 ರೂಗೆ ನೀಡಲಾಗುವುದು ಎಂದು ಘೋಷಿಸಿತು. ಆಗ ಕೆಲವು ರಾಜ್ಯಗಳು ಹಣ ನೀಡಿ ಲಸಿಕೆ ಖರೀದಿಸಿದವರು. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದರು.

ನಂತರ ಜೂನ್ 21 ರಂದು ಕೇಂದ್ರ ಸರ್ಕಾರವೇ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿತು. ಆಗ ಅದಕ್ಕೆ 45,000-50,000 ಕೋಟಿ ರೂಗಳಷ್ಟು ಹೊರೆ ಬೀಳುತ್ತದೆ ಎಂದು ತಜ್ಞರ ಅಭಿಪ್ರಾಯ ಆಧರಿಸಿ ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿತ್ತು.

ಒಟ್ಟಿನಲ್ಲಿ ಭಾರತದ 18 ವರ್ಷ ಮೇಲ್ಪಟ್ಟ 94 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಲು ಒಟ್ಟು 1 ಲಕ್ಷ ಕೋಟಿ ರೂ ಹಣ ಖರ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದುವರಿದು ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಉಚಿತ ಪಡಿತರ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. 2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.! ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಪಡಿತರಕ್ಕೆಂದು ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ಎನ್ನುತ್ತಾರೆ ಚಿಂತಕರಾದ ಶಿವಸುಂದರ್‌ರವರು.

ಅಂದರೆ ವ್ಯಾಕ್ಸಿನ್ ಮತ್ತು ಪಡಿತರಕ್ಕೆಂದು ಕೇಂದ್ರ ಸರ್ಕಾರ ಮೊದಲೇ ಹಣ ಎತ್ತಿಟ್ಟಿದೆ. ಅದನ್ನು ಬಜೆಟ್‌ನಲ್ಲಿಯೂ ಘೋಷಿಸಿದೆ. ಕೋವಿಡ್ ನಂತರ ಅದರ ಮೇಲೆ ಹೆಚ್ಚುವರಿಯಾಗಿ 1,15,000 ಕೋಟಿ ರೂಗಳು ಹೊರೆ ಬಿದ್ದಿದೆ ಅಷ್ಟೇ.

ಆದರೆ 2020-21ರ ಒಂದೇ ವರ್ಷದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಸಂಗ್ರಹಿಸಿರುವುದಾಗಿ ಒಪ್ಪಿಕೊಂಡಿದೆ. ಅಷ್ಟು ಮಾತ್ರವಲ್ಲದೆ ಅದಕ್ಕೂ ಮೊದಲು ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿತ್ತು. 2021 ರ ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂತ ಹೆಚ್ಚು! ಹೀಗಿರುವಾಗ ಇಷ್ಟೆಲ್ಲಾ ಹಣವನ್ನು ಲಸಿಕೆ ಮತ್ತು ಪಡಿತರಕ್ಕಾಗಿ ಬಳಸಿದ್ದೇವೆ ಎಂದು ಹೇಳುವುದು ಸಮರ್ಥನಿಯವೇ?

ಕೋವಿಡ್ ಕಾರಣಕ್ಕಾಗಿ ಲಸಿಕೆ ಮತ್ತು ಪಡಿತರದಿಂದ ಸರ್ಕಾರದ ಮೇಲೆ ಬಿದ್ದಿರುವ ಹೊರೆ 1,15,000 ಕೋಟಿ ರೂಗಳು. ಆದರೆ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದಲೇ ಈ ಏಳು ವರ್ಷಗಳಲ್ಲಿ 15 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹಿಸಿದೆ. ಅದರಲ್ಲಿ ಬಹುಪಾಲನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ. ಅದರೊಂದಿಗೆ ಕೋವಿಡ್ ಪರಿಹಾರಕ್ಕಾಗಿಯೇ ಪಿಎಂ ಕೇರ್ಸ್‌ ಮೂಲಕ ಹಣ ಸಂಗ್ರಹಿಸಿದೆ. ಹಾಗಾಗಿ ಕೇಂದ್ರ ಸಚಿವರ ‘ಉಚಿತ ಕೊರೊನಾ ಲಸಿಕೆ ನೀಡಿದ್ದೆ ಇಂಧನ ಬೆಲೆ ಗಗನಕ್ಕೇರಲು ಕಾರಣ’ ಎಂಬ ವಾದ ಸಮರ್ಥನೀಯವಲ್ಲ ಎಂದು ತೀರ್ಮಾನಿಸಬಹುದಾಗಿದೆ.

ಇನ್ನು ಕಲವು ಬಿಜೆಪಿ ಮುಖಂಡರು ಮತ್ತು ಸಚಿವರು ಪೆಟ್ರೋಲ್ ದರ ಹೆಚ್ಚಳಕ್ಕೆ ಯುಪಿಎ ಆಡಳಿತ ಕಾಲದ ಆಯಿಲ್ ಬಾಂಡ್‌ಗಳು ಕಾರಣ ಎಂದು ವಾದಿಸಿದ್ದಾರೆ. ಆ ಕುರಿತು ನಿಜಾಂಶ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...