Homeಮುಖಪುಟ"ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ" ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

“ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ” ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

- Advertisement -
- Advertisement -

ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, “ತರಬೇತಿ ಪಡೆದು ತಮಿಳುನಾಡಿನಿಂದ ಬರುತ್ತಾರೆ. ಇಲ್ಲಿ ಬಂದು ಬಾಂಬ್ ಹಾಕುತ್ತಾರೆ. ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ” ಎಂದು ಹೇಳಿದ್ದರು.

ಈ ಹೇಳಿಕೆ ತಮಿಳುನಾಡಿದಾದ್ಯಂತ ವೈರಲ್ ಆಗಿದ್ದು, ಕೇಂದ್ರ ಸಚಿವೆಯಾಗಿ ತಮ್ಮ ವಿರುದ್ದ ಆಧಾರ ರಹಿತ ಆರೋಪ ಮಾಡಿರುವ ಶೋಭಾ ಕರಂದ್ಲಾಜೆ ವಿರುದ್ದ ತಮಿಳಿಗರು ಕೆಂಡಾಮಂಡಲರಾಗಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ಹೇಳಿಕೆ ನೀಡಲು ಒಂದಾ ಎನ್‌ಐಎ ಅಧಿಕಾರಿಯಾಗಿರಬೇಕು, ಇಲ್ಲಾ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಅಪರಾಧಿ ಜೊತೆ ನಿಕಟ ಸಂಪರ್ಕ ಹೊಂದಿದವರಾಗಿರಬೇಕು. ಅಲ್ಲದೆ, ಇಂತಹ ಹೇಳಿಕೆ ನೀಡಲು ಶೋಭಾ ಕರಂದ್ಲಾಜೆ ಅವರಿಗೆ ಅಧಿಕಾರ ಇಲ್ಲ. ತಮಿಳರು ಮತ್ತು ಕನ್ನಡಿಗರು ಬಿಜೆಪಿಯ ಈ ವಿಭಜನೆಯ ಮಾತುಗಳನ್ನು ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

“ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ಪ್ರಧಾನಿಯಿಂದ ಹಿಡಿದು ಕಾರ್ಯಕರ್ತವರೆಗೆ ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜಣೆ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಚುನಾವಣಾ ಆಯೋಗ ಈ ದ್ವೇಷ ಭಾಷಣ ಗಮನಿಸಬೇಕು ಮತ್ತು ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಕ್ಷಮೆ ಯಾಚಿಸಿದ ಶೋಭಾ ಕರಂದ್ಲಾಜೆ :

ತನ್ನ ಹೇಳಿಕೆಯ ವಿರುದ್ದ ತಮಿಳರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ತಮಿಳುನಾಡಿನ ಸಹೋದರ-ಸಹೋದರಿಯರೇ, “ನನ್ನ ಮಾತುಗಳು ಪ್ರಕರಣದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಹೊಂದಿತ್ತೇ ಹೊರತು, ಆರೋಪ ಹೊರಿಸುವ ಆಶಯ ಇರಲಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ, ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿರುವುದನ್ನು ಗಮನಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆಯ ಸ್ಪೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಬಗ್ಗೆ ಹೇಳಿರುವುದಾಗಿತ್ತು. ತಮಿಳುನಾಡಿನ ಎಲ್ಲರಿಗೂ, ನನ್ನ ಹೃದಯದಿಂದ ಕ್ಷಮೆ ಕೇಳುತ್ತೇನೆ. ನಾನು ನನ್ನ ಈ ಹಿಂದಿನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...