Homeಮುಖಪುಟಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

- Advertisement -
- Advertisement -

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು “ಭಾರತದ ಮಾತೆ” ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಬಣ್ಣಿಸಿದ್ದು,  ಕಾಂಗ್ರೆಸ್ ಸರಕಾರದಲ್ಲಿ ದಿವಂಗತ ಮುಖ್ಯಮಂತ್ರಿಯಾಗಿದ್ದ ಕೆ ಕರುಣಾಕರನ್ ಅವರು ಧೈರ್ಯಶಾಲಿ ಆಡಳಿತಗಾರ ಎಂದು ಎಂದು ಹೇಳಿದ್ದಾರೆ.

ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸುರೇಶ್‌ ಗೋಪಿ,  ಕರುಣಾಕರನ್ ಮತ್ತು ಮಾರ್ಕ್ಸ್‌ವಾದಿ ಹಿರಿಯ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಸುನೀಲ್ ಕುಮಾರ್ ಗೆಲುವನ್ನು ಸಾಧಿಸಿದ್ದರು.  ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 2019 ರಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋತಿದ್ದರು. ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದರು. ಈ ಬಾರಿ ಗೆಲ್ಲುವ ಮೂಲಕ ಕೇರಳದಲ್ಲಿ ಗೆದ್ದ ಮೊದಲ ಬಿಜೆಪಿ ಸಂಸದರಾಗಿದ್ದಾರೆ. ಎಲ್‌ಡಿಎಫ್‌ನಿಂದ ವಿಎಸ್ ಸುನೀಲ್ ಕುಮಾರ್ ಎರಡನೇ ಸ್ಥಾನದಲ್ಲಿದ್ದರೆ, ಯುಡಿಎಫ್‌ನಿಂದ ಕೆ ಮುರಳೀಧರನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದರು.

ಕರುಣಾಕರನ್ ಸ್ಮಾರಕಕ್ಕೆ  ಭೇಟಿಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ ಸುರೇಶ್‌ ಗೋಪಿ, ತಮ್ಮ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಇ ಕೆ ನಾಯನಾರ್ ಮತ್ತು ಪತ್ನಿ ಶಾರದಾ ಟೀಚರ್ ಅವರಂತೆ ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ನಾನು ನಿಕಟ ಸಂಬಂಧ ಹೊಂದಿದ್ದೆ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯನ್ನು ಭಾರತದ ಮಾತೆ ಮತ್ತು ಕರುಣಾಕರನ್ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ ಎಂದು ಕೂಡ ಸುರೇಶ್‌ ಗೋಪಿ ಹೇಳಿದ್ದಾರೆ. ಇದಲ್ಲದೆ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ ಸಂಘರ್ಷ ಕುರಿತ ‘ಬ್ರದರ್ಲೆಸ್ ನೈಟ್’ ಕಾದಂಬರಿಗೆ ಅಂತರಾಷ್ಟ್ರೀಯ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...