Homeಮುಖಪುಟಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

- Advertisement -
- Advertisement -

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು “ಭಾರತದ ಮಾತೆ” ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಬಣ್ಣಿಸಿದ್ದು,  ಕಾಂಗ್ರೆಸ್ ಸರಕಾರದಲ್ಲಿ ದಿವಂಗತ ಮುಖ್ಯಮಂತ್ರಿಯಾಗಿದ್ದ ಕೆ ಕರುಣಾಕರನ್ ಅವರು ಧೈರ್ಯಶಾಲಿ ಆಡಳಿತಗಾರ ಎಂದು ಎಂದು ಹೇಳಿದ್ದಾರೆ.

ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸುರೇಶ್‌ ಗೋಪಿ,  ಕರುಣಾಕರನ್ ಮತ್ತು ಮಾರ್ಕ್ಸ್‌ವಾದಿ ಹಿರಿಯ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಸುನೀಲ್ ಕುಮಾರ್ ಗೆಲುವನ್ನು ಸಾಧಿಸಿದ್ದರು.  ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 2019 ರಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋತಿದ್ದರು. ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದರು. ಈ ಬಾರಿ ಗೆಲ್ಲುವ ಮೂಲಕ ಕೇರಳದಲ್ಲಿ ಗೆದ್ದ ಮೊದಲ ಬಿಜೆಪಿ ಸಂಸದರಾಗಿದ್ದಾರೆ. ಎಲ್‌ಡಿಎಫ್‌ನಿಂದ ವಿಎಸ್ ಸುನೀಲ್ ಕುಮಾರ್ ಎರಡನೇ ಸ್ಥಾನದಲ್ಲಿದ್ದರೆ, ಯುಡಿಎಫ್‌ನಿಂದ ಕೆ ಮುರಳೀಧರನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದರು.

ಕರುಣಾಕರನ್ ಸ್ಮಾರಕಕ್ಕೆ  ಭೇಟಿಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ ಸುರೇಶ್‌ ಗೋಪಿ, ತಮ್ಮ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಇ ಕೆ ನಾಯನಾರ್ ಮತ್ತು ಪತ್ನಿ ಶಾರದಾ ಟೀಚರ್ ಅವರಂತೆ ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ನಾನು ನಿಕಟ ಸಂಬಂಧ ಹೊಂದಿದ್ದೆ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯನ್ನು ಭಾರತದ ಮಾತೆ ಮತ್ತು ಕರುಣಾಕರನ್ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ ಎಂದು ಕೂಡ ಸುರೇಶ್‌ ಗೋಪಿ ಹೇಳಿದ್ದಾರೆ. ಇದಲ್ಲದೆ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ ಸಂಘರ್ಷ ಕುರಿತ ‘ಬ್ರದರ್ಲೆಸ್ ನೈಟ್’ ಕಾದಂಬರಿಗೆ ಅಂತರಾಷ್ಟ್ರೀಯ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...