Homeಮುಖಪುಟಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

- Advertisement -
- Advertisement -

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು “ಭಾರತದ ಮಾತೆ” ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಬಣ್ಣಿಸಿದ್ದು,  ಕಾಂಗ್ರೆಸ್ ಸರಕಾರದಲ್ಲಿ ದಿವಂಗತ ಮುಖ್ಯಮಂತ್ರಿಯಾಗಿದ್ದ ಕೆ ಕರುಣಾಕರನ್ ಅವರು ಧೈರ್ಯಶಾಲಿ ಆಡಳಿತಗಾರ ಎಂದು ಎಂದು ಹೇಳಿದ್ದಾರೆ.

ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸುರೇಶ್‌ ಗೋಪಿ,  ಕರುಣಾಕರನ್ ಮತ್ತು ಮಾರ್ಕ್ಸ್‌ವಾದಿ ಹಿರಿಯ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಸುನೀಲ್ ಕುಮಾರ್ ಗೆಲುವನ್ನು ಸಾಧಿಸಿದ್ದರು.  ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 2019 ರಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋತಿದ್ದರು. ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದರು. ಈ ಬಾರಿ ಗೆಲ್ಲುವ ಮೂಲಕ ಕೇರಳದಲ್ಲಿ ಗೆದ್ದ ಮೊದಲ ಬಿಜೆಪಿ ಸಂಸದರಾಗಿದ್ದಾರೆ. ಎಲ್‌ಡಿಎಫ್‌ನಿಂದ ವಿಎಸ್ ಸುನೀಲ್ ಕುಮಾರ್ ಎರಡನೇ ಸ್ಥಾನದಲ್ಲಿದ್ದರೆ, ಯುಡಿಎಫ್‌ನಿಂದ ಕೆ ಮುರಳೀಧರನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದರು.

ಕರುಣಾಕರನ್ ಸ್ಮಾರಕಕ್ಕೆ  ಭೇಟಿಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ ಸುರೇಶ್‌ ಗೋಪಿ, ತಮ್ಮ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಇ ಕೆ ನಾಯನಾರ್ ಮತ್ತು ಪತ್ನಿ ಶಾರದಾ ಟೀಚರ್ ಅವರಂತೆ ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ನಾನು ನಿಕಟ ಸಂಬಂಧ ಹೊಂದಿದ್ದೆ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯನ್ನು ಭಾರತದ ಮಾತೆ ಮತ್ತು ಕರುಣಾಕರನ್ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ ಎಂದು ಕೂಡ ಸುರೇಶ್‌ ಗೋಪಿ ಹೇಳಿದ್ದಾರೆ. ಇದಲ್ಲದೆ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಶ್ರೀಲಂಕಾ ಸಂಘರ್ಷ ಕುರಿತ ‘ಬ್ರದರ್ಲೆಸ್ ನೈಟ್’ ಕಾದಂಬರಿಗೆ ಅಂತರಾಷ್ಟ್ರೀಯ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...