Homeಕರೋನಾ ತಲ್ಲಣ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

- Advertisement -
- Advertisement -

ತಮ್ಮ ಅನಾರೋಗ್ಯ ಪೀಡಿತ ತಾಯಿಗೆ ಆಮ್ಲಜನಕ ಸಿಲಿಂಡರ್ ಬೇಕೆಂದು ವ್ಯಕ್ತಿಯೊಬ್ಬರು ಗಟ್ಟಿಯಾಗಿ ಮಾತನಾಡಿದ್ದಕ್ಕೆ, ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಅವರು “ಎರಡೇಟು ತಿನ್ನುತ್ತಿ” ಎಂದು  ಹೇಳುವ ವೀಡಿಯೊ ಗುರುವಾರದಂದು ವೈರಲ್‌ ಆಗಿದೆ. ಘಟನೆಯ ಬಗ್ಗೆ ವಿರೋಧ ಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಮಧ್ಯಪ್ರದೇಶದ ಆಸ್ಪತ್ರೆಯಿಂದ ಆಮ್ಲಜನಕ ಸಿಲಿಂಡರ್‌ಗಳನ್ನು ಲೂಟಿ ಮಾಡಿದ ಘಟನೆ ನಡೆದ ಎರಡು ದಿನಗಳ ನಂತರ ದಮೋಹ್‌ನ ಸಂಸದರಾಗಿರುವ ಪ್ರಹ್ಲಾದ್‌‌ ಪಟೇಲ್ ಅಲ್ಲಿನ ಜಿಲ್ಲಾ ಆಸ್ಪತ್ರೆಯನ್ನು ಪರಿಶೀಲಿಸುತ್ತಿದ್ದರು.

“ಕೊರೊನಾ ರೋಗಿಯಾಗಿರುವ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಬೇಕಿತ್ತು, 36 ಗಂಟೆಗಳ ನಂತರ ನೀಡುವುದಾಗಿ ಹೇಳಲಾಗಿತ್ತು, ಆದರೆ ಅದನ್ನು ಇನ್ನೂ ಒದಗಿಸಲಾಗಿಲ್ಲ” ಎಂದು ಸಂತ್ರಸ್ತ ವ್ಯಕ್ತಿಯು ಪ್ರಹ್ಲಾದ್‌ ಪಟೇಲ್‌ ಜೊತೆ ಬೆರಳು ಎತ್ತಿ ಮಾತನಾಡಿದ್ದರು. ಇದಕ್ಕೆ ಕೋಪಗೊಂಡ ಮಂತ್ರಿ ಅವರ ಬೆರಳನ್ನು ಕೆಳಕ್ಕೆ ಇಳಿಸುವಂತೆ ಸೂಚಿಸಿ, “ಈ ರೀತಿ ಮಾತನಾಡಿದರೆ ಎರಡೇಟು ತಿನ್ನುತ್ತಿ. (ಐಸಾ ಬೊಲೆಗಾ ತು ದೊ ಖಾಯೇಗಾ)” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಆದರೆ ಸಂತ್ರಸ್ತ ವ್ಯಕ್ತಿಯೂ ಅಷ್ಟಕ್ಕೆ ನಿಲ್ಲಿಸದೆ, ತಾನು ಏಟು ತಿನ್ನಲು ಸಿದ್ದನಾಗಿರುವುದಾಗಿ ಹೇಳಿದ್ದು, ತನ್ನ ತಾಯಿ ಆಗಲೇ ಹೊಡೆತಗಳನ್ನು ತಿನ್ನುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ.

ನಂತರ ಘಟನೆಯನ್ನು ವಿಡಿಯೊ ಮಾಡಲಾಗುತ್ತಿದೆ ಎಂದು ಅರಿತುಕೊಂಡ ಪ್ರಹ್ಲಾದ್‌‌ ಪಟೇಲ್ ಆ ವ್ಯಕ್ತಿಗೆ, “ಶಾಂತನಾಗು, ನಿನಗೆ ಆಮ್ಲಜನಕ ನೀಡಲು ನಿರಾಕರಿಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅಸಾಹಯಕತೆಯಿಂದ ಉತ್ತರಿಸಿದ ಸಂತ್ರಸ್ತ ವ್ಯಕ್ತಿಯು, “ಹೌದು ನನಗೆ ಆಮ್ಲಜನಕ ನಿರಾಕರಿಸಲಾಗಿದೆ” ಎಂದು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಮುಖ್ಯ ವಕ್ತಾರ ಕೆ.ಕೆ. ಮಿಶ್ರಾ, “ದಾಮೋಹ್‌‌ನಲ್ಲಿ ಮತದಾನಕ್ಕೂ ಮೊದಲು ಎಲ್ಲಾ ಸೋಂಕಿತರನ್ನು ಮಂತ್ರಿಗಳ ಕಾರಿನಲ್ಲಿ ಭೋಪಾಲ್‌ ಮತ್ತು ಜಬಲ್‌ಪುರ ಆಸ್ಪತ್ರೆಗಳಲ್ಲಿ ಭರ್ತಿ ಮಾಡುತ್ತಿದ್ದರು. ಈಗ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿಯನ್ನು ಉಳಿಸಲು ಆಮ್ಲಜನಕಕ್ಕಾಗಿ ಮನವಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರಿಗೆ ಕಪಾಳ ಮೋಕ್ಷ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ!. ಅವರ ಕೆಲಸ ಮುಗಿದಿದೆ” ಎಂದು ಹೇಳಿದ್ದಾರೆ.

ಮಂಗಳವಾರ ರಾತ್ರಿ, ದಾಮೋಹ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಕುಟುಂಬ ಸದಸ್ಯರು ಬಲವಂತವಾಗಿ ಆಮ್ಲಜನಕ ಸಿಲಿಂಡರ್‌ಗಳನ್ನು ಕಸಿದುಕೊಂಡ ಘಟನೆ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಆಸ್ಪತ್ರೆ ಆಡಳಿತ ಮಂಡಳಿಯು ಪೊಲೀಸರನ್ನು ಕರೆಯಬೇಕಾಗಿ ಬಂದಿತ್ತು.

ಇದನ್ನೂ ಓದಿ: ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?: ಅಘೋಷಿತ ಲಾಕ್‌ಡೌನ್‌‌ಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...