Homeಕರೋನಾ ತಲ್ಲಣ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

- Advertisement -
- Advertisement -

ತಮ್ಮ ಅನಾರೋಗ್ಯ ಪೀಡಿತ ತಾಯಿಗೆ ಆಮ್ಲಜನಕ ಸಿಲಿಂಡರ್ ಬೇಕೆಂದು ವ್ಯಕ್ತಿಯೊಬ್ಬರು ಗಟ್ಟಿಯಾಗಿ ಮಾತನಾಡಿದ್ದಕ್ಕೆ, ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಅವರು “ಎರಡೇಟು ತಿನ್ನುತ್ತಿ” ಎಂದು  ಹೇಳುವ ವೀಡಿಯೊ ಗುರುವಾರದಂದು ವೈರಲ್‌ ಆಗಿದೆ. ಘಟನೆಯ ಬಗ್ಗೆ ವಿರೋಧ ಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಮಧ್ಯಪ್ರದೇಶದ ಆಸ್ಪತ್ರೆಯಿಂದ ಆಮ್ಲಜನಕ ಸಿಲಿಂಡರ್‌ಗಳನ್ನು ಲೂಟಿ ಮಾಡಿದ ಘಟನೆ ನಡೆದ ಎರಡು ದಿನಗಳ ನಂತರ ದಮೋಹ್‌ನ ಸಂಸದರಾಗಿರುವ ಪ್ರಹ್ಲಾದ್‌‌ ಪಟೇಲ್ ಅಲ್ಲಿನ ಜಿಲ್ಲಾ ಆಸ್ಪತ್ರೆಯನ್ನು ಪರಿಶೀಲಿಸುತ್ತಿದ್ದರು.

“ಕೊರೊನಾ ರೋಗಿಯಾಗಿರುವ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಬೇಕಿತ್ತು, 36 ಗಂಟೆಗಳ ನಂತರ ನೀಡುವುದಾಗಿ ಹೇಳಲಾಗಿತ್ತು, ಆದರೆ ಅದನ್ನು ಇನ್ನೂ ಒದಗಿಸಲಾಗಿಲ್ಲ” ಎಂದು ಸಂತ್ರಸ್ತ ವ್ಯಕ್ತಿಯು ಪ್ರಹ್ಲಾದ್‌ ಪಟೇಲ್‌ ಜೊತೆ ಬೆರಳು ಎತ್ತಿ ಮಾತನಾಡಿದ್ದರು. ಇದಕ್ಕೆ ಕೋಪಗೊಂಡ ಮಂತ್ರಿ ಅವರ ಬೆರಳನ್ನು ಕೆಳಕ್ಕೆ ಇಳಿಸುವಂತೆ ಸೂಚಿಸಿ, “ಈ ರೀತಿ ಮಾತನಾಡಿದರೆ ಎರಡೇಟು ತಿನ್ನುತ್ತಿ. (ಐಸಾ ಬೊಲೆಗಾ ತು ದೊ ಖಾಯೇಗಾ)” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಆದರೆ ಸಂತ್ರಸ್ತ ವ್ಯಕ್ತಿಯೂ ಅಷ್ಟಕ್ಕೆ ನಿಲ್ಲಿಸದೆ, ತಾನು ಏಟು ತಿನ್ನಲು ಸಿದ್ದನಾಗಿರುವುದಾಗಿ ಹೇಳಿದ್ದು, ತನ್ನ ತಾಯಿ ಆಗಲೇ ಹೊಡೆತಗಳನ್ನು ತಿನ್ನುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ.

ನಂತರ ಘಟನೆಯನ್ನು ವಿಡಿಯೊ ಮಾಡಲಾಗುತ್ತಿದೆ ಎಂದು ಅರಿತುಕೊಂಡ ಪ್ರಹ್ಲಾದ್‌‌ ಪಟೇಲ್ ಆ ವ್ಯಕ್ತಿಗೆ, “ಶಾಂತನಾಗು, ನಿನಗೆ ಆಮ್ಲಜನಕ ನೀಡಲು ನಿರಾಕರಿಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅಸಾಹಯಕತೆಯಿಂದ ಉತ್ತರಿಸಿದ ಸಂತ್ರಸ್ತ ವ್ಯಕ್ತಿಯು, “ಹೌದು ನನಗೆ ಆಮ್ಲಜನಕ ನಿರಾಕರಿಸಲಾಗಿದೆ” ಎಂದು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಮುಖ್ಯ ವಕ್ತಾರ ಕೆ.ಕೆ. ಮಿಶ್ರಾ, “ದಾಮೋಹ್‌‌ನಲ್ಲಿ ಮತದಾನಕ್ಕೂ ಮೊದಲು ಎಲ್ಲಾ ಸೋಂಕಿತರನ್ನು ಮಂತ್ರಿಗಳ ಕಾರಿನಲ್ಲಿ ಭೋಪಾಲ್‌ ಮತ್ತು ಜಬಲ್‌ಪುರ ಆಸ್ಪತ್ರೆಗಳಲ್ಲಿ ಭರ್ತಿ ಮಾಡುತ್ತಿದ್ದರು. ಈಗ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿಯನ್ನು ಉಳಿಸಲು ಆಮ್ಲಜನಕಕ್ಕಾಗಿ ಮನವಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರಿಗೆ ಕಪಾಳ ಮೋಕ್ಷ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ!. ಅವರ ಕೆಲಸ ಮುಗಿದಿದೆ” ಎಂದು ಹೇಳಿದ್ದಾರೆ.

ಮಂಗಳವಾರ ರಾತ್ರಿ, ದಾಮೋಹ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಕುಟುಂಬ ಸದಸ್ಯರು ಬಲವಂತವಾಗಿ ಆಮ್ಲಜನಕ ಸಿಲಿಂಡರ್‌ಗಳನ್ನು ಕಸಿದುಕೊಂಡ ಘಟನೆ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಆಸ್ಪತ್ರೆ ಆಡಳಿತ ಮಂಡಳಿಯು ಪೊಲೀಸರನ್ನು ಕರೆಯಬೇಕಾಗಿ ಬಂದಿತ್ತು.

ಇದನ್ನೂ ಓದಿ: ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?: ಅಘೋಷಿತ ಲಾಕ್‌ಡೌನ್‌‌ಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...