Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...