Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...