Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...