Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...