Homeಮುಖಪುಟಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಕೇಂದ್ರ ಕ್ರೀಡಾ ಸಚಿವರ ಭೇಟಿ; ಸಭೆ ವಿಫಲ; ಪ್ರತಿಭಟನೆ ಹೆಚ್ಚಿಸುವುದಾಗಿ ಎಚ್ಚರಿಕೆ

ಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಕೇಂದ್ರ ಕ್ರೀಡಾ ಸಚಿವರ ಭೇಟಿ; ಸಭೆ ವಿಫಲ; ಪ್ರತಿಭಟನೆ ಹೆಚ್ಚಿಸುವುದಾಗಿ ಎಚ್ಚರಿಕೆ

ಕುಸ್ತಿಪಟುಗಳು ಕುಸ್ತಿ ಒಕ್ಕೂಟದ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ

- Advertisement -
- Advertisement -

ಕ್ರೀಡಾ ಆಡಳಿತ ಮಂಡಳಿಯ ಮುಖ್ಯಸ್ಥರು ಮತ್ತು ಅದರ ತರಬೇತುದಾರರು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಭಾರತದ ಖ್ಯಾತ ಕುಸ್ತಿಪಟುಗಳನ್ನು ಭೇಟಿಯಾಗಿದ್ದಾರೆ. ಆದರೆ ಸಭೆಯಲ್ಲಿ ಯಾವುದೆ ನಿರ್ಣಯವನ್ನು ತೆಗೆದುಕೊಳ್ಳದ ಕಾರಣ ಸಭೆಯು ವಿಫವಾಗಿದೆ.

ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ಕುಸ್ತಿ ಒಕ್ಕೂಟವನ್ನು ವಿಸರ್ಜಿಸುವ ಮತ್ತು ಸಂಸ್ಥೆಯ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತನಿಖೆ ನಡೆಸಬೇಕು ಎಂಬ ಆಟಗಾರರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ಹೆಚ್ಚಿಸುವುದಾಗಿ ಕುಸ್ತಿಪಟುಗಳು ಎಚ್ಚರಿಕೆ ನೀಡಿದ ಹಿನ್ನೆಲೆ ಗುರುವಾರ ಕ್ರೀಡಾ ಸಚಿವರೊಂದಿಗಿನ ಸಭೆ ನಡೆದಿದೆ ಎಂದು ವರದಿಯಾಗಿವೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್‌ ಕುಸ್ತಿಪಟುಗಳು ಮಾಡಿರುವ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ ಕ್ರೀಡಾಪಟುಗಳು ಬ್ರಿಜ್‌‌ಭೂಷಣ್ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಕನಿಷ್ಠ 10-12 ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.

ಫೋಗಟ್ ಮತ್ತು ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಅನುರಾಗ್ ಅವರನ್ನು ಗುರುವಾರ ರಾತ್ರಿ ಅವರ ಮನೆಯಲ್ಲಿ ಭೇಟಿಯಾಗಿ ತ್ವರಿತ ಕ್ರಮಕ್ಕೆ ಕೋರಿದ್ದಾರೆ. ಕ್ರೀಡಾ ಸಚಿವಾಲಯವು ಭಾರತ ಕುಸ್ತಿ ಫೆಡರೇಶನ್‌‌ಗೆ ಆರೋಪಗಳಿಗೆ ಅಧಿಕೃತ ಪ್ರತಿಕ್ರಿಯೆ ನೀಡುವಂತೆ ಕೋರಿದ್ದು, ಅದಕ್ಕಾಗಿ ಕಾಯುವಂತೆ ಸಚಿವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಭೆಯ ಮೊದಲು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, “ಸರ್ಕಾರವು ಕ್ರೀಡೆ ಮತ್ತು ಆಟಗಾರರ ಕಲ್ಯಾಣ ಮತ್ತು ಉನ್ನತಿಗಾಗಿ ಕೆಲಸ ಮಾಡಿದೆ. ಭಾರತವು ಸಾಕಷ್ಟು ಪದಕಗಳನ್ನು ಗೆದ್ದಿದೆ ಮತ್ತು ಜಾಗತಿಕ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದೆ. ಒಕ್ಕೂಟಗಳನ್ನು ಉತ್ತಮಗೊಳಿಸುವ ಕೆಲಸ ಮಾಡಲಾಗಿದೆ. ಕುಸ್ತಿಪಟುಗಳು ಮಾಡುವ ಆರೋಪಗಳು ಗಂಭೀರ ಸ್ವರೂಪದ್ದಾಗಿರುತ್ತವೆ” ಎಂದು ಹೇಳಿದ್ದಾರೆ.

ಸಚಿವರೊಂದಿಗಿನ ಭೇಟಿಗೂ ಮುನ್ನ ಗುರುವಾರ, ಕ್ರೀಡಾಪಟುಗಳು ಭಾರತೀಯ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ಸಂದೀಪ್ ಪ್ರಧಾನ್ ಮತ್ತು ಕ್ರೀಡಾ ಕಾರ್ಯದರ್ಶಿ ಸುಜಾತಾ ಚತುರ್ವೇದಿ ಅವರನ್ನು ಭೇಟಿಯಾಗಿದ್ದರು.

ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಂದಿಲ್ಲ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕುಸ್ತಿಯಾಡುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದು, “ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಅವರನ್ನು ತೆಗೆದುಹಾಕಿ, ಅದರು ಜೈಲಿಗೆ ಹೋಗುವವರೆಗೂ ನಾವು ಬಿಡುವುದಿಲ್ಲ. ಒಂದು ವೇಳೆ ಸರಕಾರ ಕ್ರಮ ಕೈಗೊಳ್ಳದಿದ್ದರೆ ಪೊಲೀಸರ ಮೊರೆ ಹೋಗುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರು ಗುರುವಾರ ಕುಸ್ತಿಪಟು ಹಾಗೂ ಬಿಜೆಪಿ ನಾಯಕಿಯು ಆಗಿರುವ ಬಬಿತಾ ಫೋಗಟ್‌ ಅವರನ್ನು ಭೇಟಿಯಾಗಿದ್ದು ಅವರಿಂದಲೂ ಬೆಂಬಲ ಪಡೆದಿದ್ದಾರೆ. “ಕುಸ್ತಿಪಟುವಾಗಿ ನನ್ನ ವೃತ್ತಿಜೀವನದಲ್ಲಿ ನಿಂದನೆಯ ನಿದರ್ಶನಗಳನ್ನು ಅನುಭವಿಸಿದ್ದೇನೆ. ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ. ಈಗ ಎದ್ದಿರುವ ಧ್ವನಿಗಳು ಬಹಳ  ಮುಖ್ಯ” ಎಂದು ಫೋಗಟ್ ಹೇಳಿದ್ದಾರೆ

ಕುಸ್ತಿಪಟುಗಳು ತಮ್ಮ ಸ್ವಾಭಿಮಾನಕ್ಕಾಗಿ ಹೋರಾಡುತ್ತಿದ್ದಾರೆ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದ ಕ್ರೀಡಾಪಟುಗಳೊಂದಿಗೆ ತಮ್ಮ ಗುರುತನ್ನು ಬಹಿರಂಗಪಡಿಸಲು ಒತ್ತಾಯಿಸಬೇಡಿ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

“ನಾವು ಮುಂದೆ ಬಂದು ನಮಗೆ ಏನಾಯಿತು ಎಂದು ಹೇಳಲು ಬಯಸುವುದಿಲ್ಲ. ನಮ್ಮನ್ನು ಬಲವಂತಪಡಿಸಿದರೆ ನಮಗೆ ಹೀಗಾಯಿತು ಎಂದು ದೇಶದ ಹೆಣ್ಣುಮಕ್ಕಳು ಮಾಧ್ಯಮಗಳ ಮುಂದೆ ಪುರಾವೆಯೊಂದಿಗೆ ಬರಬೇಕಾಗಿರುವುದು ನಾಚಿಕೆಗೇಡಿನ ಸಂಗತಿ. ಆ ಕರಾಳ ದಿನವನ್ನು ನಾವು ನೋಡ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಹಿರಿಯ ಮಹಿಳಾ ಅಥ್ಲೆಟಿಕ್ಸ್ ತರಬೇತುದಾರರು ಹರಿಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ವಾರಗಳ ನಂತರ ಬ್ರಿಜ್‌ಭೂಷಣ್‌ ಸಿಂಗ್ ವಿರುದ್ಧ ಕುಸ್ತಿಪಟುಗಳು ಆರೋಪ ಮಾಡಿದ್ದಾರೆ. ಜನವರಿ 1 ರಂದು, ಚಂಡೀಗಢ ಪೊಲೀಸರು ಕುರುಕ್ಷೇತ್ರದ ಪೆಹೋವಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸಂದೀಪ್‌ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...