Homeಕರ್ನಾಟಕಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

ಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

- Advertisement -
- Advertisement -

“ಭಾರತವು ಕೇಂದ್ರೀಯ ವ್ಯವಸ್ಥೆಯಲ್ಲ; ಒಕ್ಕೂಟ ವ್ಯವಸ್ಥೆ. ಯಾರೂ ಯಾರ ಮೇಲೂ ಯಾವುದನ್ನೂ ಹೇರಲು ಸಾಧ್ಯವಿಲ್ಲ” ಎಂದು ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ‘ಗಂಡಾಂತರದಲ್ಲಿ ಗಣರಾಜ್ಯ’ ಚಿಂತನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ ಅದರ ನೀತಿ ಎಂದು ಪದ್ಯ ಹೇಳುತ್ತದೆ. ಆ ಒಂದು ಪದ್ಯ, ಕರ್ನಾಟಕದ ಭೂಮಿ, ಜನರು, ವಿಶಿಷ್ಟತೆ, ಹೆಸರು, ಇರಬೇಕಾದ ಪ್ರಮುಖ ನೀತಿಗಳ ಕುರಿತು ವ್ಯಾಖ್ಯಾನ ಮಾಡುತ್ತದೆ” ಎಂದರು.

“ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವು ಸದಸ್ಯ ರಾಜ್ಯವಾಗಿದೆ. ಪ್ರತಿ ಒಕ್ಕೂಟವು ನೈಸರ್ಗಿಕವಾದ ಹಕ್ಕುಗಳನ್ನು ಹೊಂದಿರುತ್ತದೆ. ಅದರಲ್ಲಿ ಭಾಷೆಯನ್ನ ಕೇಂದ್ರೀಕರಿಸಿ, ರಾಜ್ಯವು ಸಂಘಟಿತವಾಗಬಹುದು. ಹೀಗಾಗಿಯೇ, ಸ್ವಾತಂತ್ರ್ಯ ಹೋರಾಟದ ಜೊತೆಗೆ ನಮ್ಮ ಹಿರಿಕರು ಏಕೀಕರಣ ಚಳುವಳಿಯನ್ನೂ ನಡೆಸಿದರು” ಎಂದು ವಿವರಿಸಿದರು.

“ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಏಕೀಕರಣ ಚಳುವಳಿಯಲ್ಲಿಯೂ ಭಾಗಿಯಾಗಿದ್ದರು. ಕರ್ನಾಟಕದ ರಾಷ್ಟ್ರೀಯತೆ ಬಗ್ಗೆ ನಮ್ಮ ಹಿರಿಯರು ದೇಶದ ಸ್ವಾತಂತ್ರ್ಯ ಮತ್ತು ರಾಜ್ಯದ ಏಕೀಕರಣ ಎರಡೂ ಒಟ್ಟಿಗೆ ನಡೆಯಬೇಕು ಎಂದು ಹೇಳಿದ್ದರು. ಆಲೂರು ವೆಂಕಟರಾಯರು ‘ಕರ್ನಾಟಕತ್ವದ ಸೂತ್ರಗಳು’ ಎಂದು ಪುಸ್ತಕವನ್ನು ಬರೆದಿದ್ದರು. ಅದರಲ್ಲಿ ಹಲವು ಸಮಸ್ಯೆಗಳಿದ್ದರೂ, ಅದು ಬಹಳ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ಕರ್ನಾಟಕ ಏಕೀಕರಣದ ಬಳಿಕ ಅವರು ಕರ್ನಾಟಕತ್ವದ ಬಗ್ಗೆ ಬರೆದಿದದ್ದು ಮಹತ್ವದ್ದು. ಕರ್ನಾಟಕದ ಮೂಲಕವೇ ಜಗತ್ತನ್ನು ನೋಡಬೇಕೆಂದು ಅವರು ಹೇಳಿದ್ದರು. ನಮ್ಮ ಹಿರಿಯರೂ ಕೂಡ ಅದನ್ನೇ ಹೇಳಿದ್ದರು” ಎಂದು ತಿಳಿಸಿದರು.

“ನಮ್ಮ ‘ಜನಗಣಮನ’ ಭಾರತವನ್ನು ಒಂದು ಒಕ್ಕೂಟ ಎಂದೇ ಹೇಳುತ್ತದೆ. ಭಾರತದ ಎಲ್ಲ ರಾಜ್ಯಗಳು, ಭೂಪ್ರದೇಶದ ಬಗ್ಗೆ ಠ್ಯಾಗೂರ್ ಬರೆದಿದ್ದಾರೆ. ಭಾರತದ ಸರ್ಕಾರ ಕೇಂದ್ರ ಸರ್ಕಾರವಲ್ಲ; ಒಕ್ಕೂಟ ಸರ್ಕಾರ. ಯಾರೂ ಯಾವುದೇ ರಾಜ್ಯದ ಮೇಲೆ ಯಾವುದನ್ನೂ ಹೇರಲು ಸಾಧ್ಯವಿಲ್ಲ. ಹಾಗೆ ಹೇರಲು ಯತ್ನಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ. ವಿರೋಧಿಸುವ ಹಕ್ಕು ನಮಗಿದೆ. ಕರ್ನಾಟಕವಾಗಲೀ, ಭಾರತವಾಗಲೀ ಎರಡೂ ಬೇರೆ-ಬೇರೆ ಎಂಟಿಟಿಯನ್ನು ಹೊಂದಿವೆ. ಅವುಗಳಲ್ಲಿರುವ ಸಮಾನ ಸಂಗತಿ ಎಂದರೆ, ಬಹು ಧರ್ಮೀಯ, ಬಹು ಭಾಷಿಕ, ಬಹು ಸಾಂಸ್ಕೃತಿಕ ಹಾಗೂ ಬಹು ಒಳ ಪ್ರಾಂತೀಯತೆಯನ್ನು ಹೊಂದಿವೆ. ಬಹುತ್ವವು ಶಾಪವಲ್ಲ. ಅದು ಪ್ರಜಾಪ್ರಭುತ್ವದ ಮೂಲವಾಗಿದೆ. ಬಹುತ್ವವನ್ನು ಕಳೆದುಕೊಂಡಾಗ ದೇಶವು ಸಮಸ್ಯೆಯನ್ನು ಎದುರಿಸುತ್ತದೆ” ಎಂದು ರಹಮತ್ ತರೀಕೆರೆ ಹೇಳಿದರು.

“ಕುವೆಂಪುಅವರ ‘ಸರ್ವರಿಗೂ ಸಮ ಪಾಲು–ಸರ್ವರಿಗೂ ಸಮ ಬಾಳು’ ಎಂಬುದು ಆರ್ಥಿಕವಾದ ಫೆಡರಲಿಸಂ ಅನ್ನು ವಿವರಿಸುತ್ತದೆ. ಅಂತೆಯೇ, ‘ಇಲ್ಲಿ ಯಾರೂ ಮುಖ್ಯರಲ್ಲ’ ಎಂದು ಹೇಳುವಾಗ, ಕೇವಲ ಮನುಷ್ಯರಷ್ಟೆ ಮುಖ್ಯವಲ್ಲ; ಮನುಷ್ಯೇತರ ಜೀವಿಗಳಿಗೂ ಭೂಮಿಯಲ್ಲಿ ಹಕ್ಕಿದೆ ಎಂದು ಹೇಳುತ್ತಾರೆ. ರಾಮಯಣ, ಮಹಾಭಾರತದಂತಹ ಗ್ರಂಥಗಳು ಭಾರತಕ್ಕಿರಬಹುದು. ಆದರೆ, ಕರ್ನಾಟಕಕ್ಕೆ ಅಂತಹ ಗ್ರಂಥಗಳನ್ನು ನೀಡಿದವರಲ್ಲಿ ಮೊದಲಿಗರು ಪಂಪ. ಸ್ವಂತಿಕೆಯ ಬಗ್ಗೆ ಕನ್ನಡವು ಯಾವಾಗಲೂ ಯೋಚಿಸಿದೆ. ನಮ್ಮ ತನವನ್ನು ನಾವು ಕಾಪಾಡಿಕೊಳ್ಳಬೇಕೆಂದು ಹಲವಾರು ಚಿಂತಕರು ಹೇಳಿದ್ದಾರೆ” ಎಂದು ತಿಳಿಸಿದರು.

“ಹಲವಾರು ಸಂದರ್ಭಗಳಲ್ಲಿ, ರಾಜರ ಆಳ್ವಿಕೆ ಇದ್ದಾಗ, ಬ್ರಿಟಿಷ್ ಆಳ್ವಿಕೆ ಇದ್ದಾಗ ಕನ್ನಡಿಗರ ಮೇಲೆ ಹಲವಾರು ರೀತಿಯ ಹೇರಿಕೆಗಳು ಕಂಡುಬಂದಿವೆ. ಈಗ, ಸಂಸ್ಕೃತ, ಹಿಂದಿ ಹೇರಿಕೆ ನಡೆಯುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬ ಬೋರ್ಡು ಕೆಳಗಿಳಿದು, ಎಸ್‌ಬಿಐ ಬೋರ್ಡು ಮೇಲೇರುವಾಗಲೂ ನಮ್ಮ ಮೇಲಿನ ಹೇರಿಕೆ ಕಾಣಸಿಗುತ್ತಿತ್ತು. ಇಂತಹ ಹೇರಿಕೆಗಳನ್ನು ಕನ್ನಡಿಗರು ನಿರಂತವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈಗಲೂ ವಿರೋಧಿಸುವುದು ನಡೆಯುತ್ತಲೇ ಇದೆ” ಎಂದು ವಿವರಿಸಿದರು.

“ನಮ್ಮದೆರು ಇರುವ ಈ ಸಂದರ್ಭದಲ್ಲಿ ನಾವು ಎದುರಿಸಬೇಕಿರುವ ಬಿಕ್ಕಟ್ಟಿನ ಕುರಿತು ಹೆಚ್ಚು ಚಿಂತನೆ ನಡೆಸಿದವರು ಗೌರಿ ಮತ್ತು ಕಲ್ಬುರ್ಗಿ ಅವರು. ಈ ಇಬ್ಬರೂ ಫೆಡರಲಿಸಂನ ಪ್ರತಿಪಾದಕರು. ಅವರು ಒಂದು ಧರ್ಮ, ಒಂದು ರಾಷ್ಟ್ರ, ಒಂದು ಭಾಷೆಯಂತೆ ಒಂದು ಎಂಬುದನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ಆಲೋಚನೆಗಳು ಅರ್ಥಪೂರ್ಣ ಪ್ರಜಾಪ್ರಭುತ್ವವನ್ನು, ಅರ್ಥಪೂರ್ಣ ಭಾರತವನ್ನು ಹಾಗೂ ಆರ್ಥಪೂರ್ಣ ಸಂವಿಧಾನದ ವ್ಯಾಖ್ಯಾನವನ್ನು ಹುಡುಕುತ್ತಿದ್ದವು. ಆ ಕಾರಣಕ್ಕಾಗಿಯೇ ಗೌರಿ ಹತ್ಯೆಯಾದರು. ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಚರ್ಚಿಸುವ ಅಗತ್ಯವಿದೆ” ಎಂದರು.

ಇದನ್ನೂ ಓದಿ; ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...