Homeಕರ್ನಾಟಕಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

ಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

- Advertisement -
- Advertisement -

“ಭಾರತವು ಕೇಂದ್ರೀಯ ವ್ಯವಸ್ಥೆಯಲ್ಲ; ಒಕ್ಕೂಟ ವ್ಯವಸ್ಥೆ. ಯಾರೂ ಯಾರ ಮೇಲೂ ಯಾವುದನ್ನೂ ಹೇರಲು ಸಾಧ್ಯವಿಲ್ಲ” ಎಂದು ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ‘ಗಂಡಾಂತರದಲ್ಲಿ ಗಣರಾಜ್ಯ’ ಚಿಂತನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ ಅದರ ನೀತಿ ಎಂದು ಪದ್ಯ ಹೇಳುತ್ತದೆ. ಆ ಒಂದು ಪದ್ಯ, ಕರ್ನಾಟಕದ ಭೂಮಿ, ಜನರು, ವಿಶಿಷ್ಟತೆ, ಹೆಸರು, ಇರಬೇಕಾದ ಪ್ರಮುಖ ನೀತಿಗಳ ಕುರಿತು ವ್ಯಾಖ್ಯಾನ ಮಾಡುತ್ತದೆ” ಎಂದರು.

“ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವು ಸದಸ್ಯ ರಾಜ್ಯವಾಗಿದೆ. ಪ್ರತಿ ಒಕ್ಕೂಟವು ನೈಸರ್ಗಿಕವಾದ ಹಕ್ಕುಗಳನ್ನು ಹೊಂದಿರುತ್ತದೆ. ಅದರಲ್ಲಿ ಭಾಷೆಯನ್ನ ಕೇಂದ್ರೀಕರಿಸಿ, ರಾಜ್ಯವು ಸಂಘಟಿತವಾಗಬಹುದು. ಹೀಗಾಗಿಯೇ, ಸ್ವಾತಂತ್ರ್ಯ ಹೋರಾಟದ ಜೊತೆಗೆ ನಮ್ಮ ಹಿರಿಕರು ಏಕೀಕರಣ ಚಳುವಳಿಯನ್ನೂ ನಡೆಸಿದರು” ಎಂದು ವಿವರಿಸಿದರು.

“ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಏಕೀಕರಣ ಚಳುವಳಿಯಲ್ಲಿಯೂ ಭಾಗಿಯಾಗಿದ್ದರು. ಕರ್ನಾಟಕದ ರಾಷ್ಟ್ರೀಯತೆ ಬಗ್ಗೆ ನಮ್ಮ ಹಿರಿಯರು ದೇಶದ ಸ್ವಾತಂತ್ರ್ಯ ಮತ್ತು ರಾಜ್ಯದ ಏಕೀಕರಣ ಎರಡೂ ಒಟ್ಟಿಗೆ ನಡೆಯಬೇಕು ಎಂದು ಹೇಳಿದ್ದರು. ಆಲೂರು ವೆಂಕಟರಾಯರು ‘ಕರ್ನಾಟಕತ್ವದ ಸೂತ್ರಗಳು’ ಎಂದು ಪುಸ್ತಕವನ್ನು ಬರೆದಿದ್ದರು. ಅದರಲ್ಲಿ ಹಲವು ಸಮಸ್ಯೆಗಳಿದ್ದರೂ, ಅದು ಬಹಳ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ಕರ್ನಾಟಕ ಏಕೀಕರಣದ ಬಳಿಕ ಅವರು ಕರ್ನಾಟಕತ್ವದ ಬಗ್ಗೆ ಬರೆದಿದದ್ದು ಮಹತ್ವದ್ದು. ಕರ್ನಾಟಕದ ಮೂಲಕವೇ ಜಗತ್ತನ್ನು ನೋಡಬೇಕೆಂದು ಅವರು ಹೇಳಿದ್ದರು. ನಮ್ಮ ಹಿರಿಯರೂ ಕೂಡ ಅದನ್ನೇ ಹೇಳಿದ್ದರು” ಎಂದು ತಿಳಿಸಿದರು.

“ನಮ್ಮ ‘ಜನಗಣಮನ’ ಭಾರತವನ್ನು ಒಂದು ಒಕ್ಕೂಟ ಎಂದೇ ಹೇಳುತ್ತದೆ. ಭಾರತದ ಎಲ್ಲ ರಾಜ್ಯಗಳು, ಭೂಪ್ರದೇಶದ ಬಗ್ಗೆ ಠ್ಯಾಗೂರ್ ಬರೆದಿದ್ದಾರೆ. ಭಾರತದ ಸರ್ಕಾರ ಕೇಂದ್ರ ಸರ್ಕಾರವಲ್ಲ; ಒಕ್ಕೂಟ ಸರ್ಕಾರ. ಯಾರೂ ಯಾವುದೇ ರಾಜ್ಯದ ಮೇಲೆ ಯಾವುದನ್ನೂ ಹೇರಲು ಸಾಧ್ಯವಿಲ್ಲ. ಹಾಗೆ ಹೇರಲು ಯತ್ನಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ. ವಿರೋಧಿಸುವ ಹಕ್ಕು ನಮಗಿದೆ. ಕರ್ನಾಟಕವಾಗಲೀ, ಭಾರತವಾಗಲೀ ಎರಡೂ ಬೇರೆ-ಬೇರೆ ಎಂಟಿಟಿಯನ್ನು ಹೊಂದಿವೆ. ಅವುಗಳಲ್ಲಿರುವ ಸಮಾನ ಸಂಗತಿ ಎಂದರೆ, ಬಹು ಧರ್ಮೀಯ, ಬಹು ಭಾಷಿಕ, ಬಹು ಸಾಂಸ್ಕೃತಿಕ ಹಾಗೂ ಬಹು ಒಳ ಪ್ರಾಂತೀಯತೆಯನ್ನು ಹೊಂದಿವೆ. ಬಹುತ್ವವು ಶಾಪವಲ್ಲ. ಅದು ಪ್ರಜಾಪ್ರಭುತ್ವದ ಮೂಲವಾಗಿದೆ. ಬಹುತ್ವವನ್ನು ಕಳೆದುಕೊಂಡಾಗ ದೇಶವು ಸಮಸ್ಯೆಯನ್ನು ಎದುರಿಸುತ್ತದೆ” ಎಂದು ರಹಮತ್ ತರೀಕೆರೆ ಹೇಳಿದರು.

“ಕುವೆಂಪುಅವರ ‘ಸರ್ವರಿಗೂ ಸಮ ಪಾಲು–ಸರ್ವರಿಗೂ ಸಮ ಬಾಳು’ ಎಂಬುದು ಆರ್ಥಿಕವಾದ ಫೆಡರಲಿಸಂ ಅನ್ನು ವಿವರಿಸುತ್ತದೆ. ಅಂತೆಯೇ, ‘ಇಲ್ಲಿ ಯಾರೂ ಮುಖ್ಯರಲ್ಲ’ ಎಂದು ಹೇಳುವಾಗ, ಕೇವಲ ಮನುಷ್ಯರಷ್ಟೆ ಮುಖ್ಯವಲ್ಲ; ಮನುಷ್ಯೇತರ ಜೀವಿಗಳಿಗೂ ಭೂಮಿಯಲ್ಲಿ ಹಕ್ಕಿದೆ ಎಂದು ಹೇಳುತ್ತಾರೆ. ರಾಮಯಣ, ಮಹಾಭಾರತದಂತಹ ಗ್ರಂಥಗಳು ಭಾರತಕ್ಕಿರಬಹುದು. ಆದರೆ, ಕರ್ನಾಟಕಕ್ಕೆ ಅಂತಹ ಗ್ರಂಥಗಳನ್ನು ನೀಡಿದವರಲ್ಲಿ ಮೊದಲಿಗರು ಪಂಪ. ಸ್ವಂತಿಕೆಯ ಬಗ್ಗೆ ಕನ್ನಡವು ಯಾವಾಗಲೂ ಯೋಚಿಸಿದೆ. ನಮ್ಮ ತನವನ್ನು ನಾವು ಕಾಪಾಡಿಕೊಳ್ಳಬೇಕೆಂದು ಹಲವಾರು ಚಿಂತಕರು ಹೇಳಿದ್ದಾರೆ” ಎಂದು ತಿಳಿಸಿದರು.

“ಹಲವಾರು ಸಂದರ್ಭಗಳಲ್ಲಿ, ರಾಜರ ಆಳ್ವಿಕೆ ಇದ್ದಾಗ, ಬ್ರಿಟಿಷ್ ಆಳ್ವಿಕೆ ಇದ್ದಾಗ ಕನ್ನಡಿಗರ ಮೇಲೆ ಹಲವಾರು ರೀತಿಯ ಹೇರಿಕೆಗಳು ಕಂಡುಬಂದಿವೆ. ಈಗ, ಸಂಸ್ಕೃತ, ಹಿಂದಿ ಹೇರಿಕೆ ನಡೆಯುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬ ಬೋರ್ಡು ಕೆಳಗಿಳಿದು, ಎಸ್‌ಬಿಐ ಬೋರ್ಡು ಮೇಲೇರುವಾಗಲೂ ನಮ್ಮ ಮೇಲಿನ ಹೇರಿಕೆ ಕಾಣಸಿಗುತ್ತಿತ್ತು. ಇಂತಹ ಹೇರಿಕೆಗಳನ್ನು ಕನ್ನಡಿಗರು ನಿರಂತವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈಗಲೂ ವಿರೋಧಿಸುವುದು ನಡೆಯುತ್ತಲೇ ಇದೆ” ಎಂದು ವಿವರಿಸಿದರು.

“ನಮ್ಮದೆರು ಇರುವ ಈ ಸಂದರ್ಭದಲ್ಲಿ ನಾವು ಎದುರಿಸಬೇಕಿರುವ ಬಿಕ್ಕಟ್ಟಿನ ಕುರಿತು ಹೆಚ್ಚು ಚಿಂತನೆ ನಡೆಸಿದವರು ಗೌರಿ ಮತ್ತು ಕಲ್ಬುರ್ಗಿ ಅವರು. ಈ ಇಬ್ಬರೂ ಫೆಡರಲಿಸಂನ ಪ್ರತಿಪಾದಕರು. ಅವರು ಒಂದು ಧರ್ಮ, ಒಂದು ರಾಷ್ಟ್ರ, ಒಂದು ಭಾಷೆಯಂತೆ ಒಂದು ಎಂಬುದನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ಆಲೋಚನೆಗಳು ಅರ್ಥಪೂರ್ಣ ಪ್ರಜಾಪ್ರಭುತ್ವವನ್ನು, ಅರ್ಥಪೂರ್ಣ ಭಾರತವನ್ನು ಹಾಗೂ ಆರ್ಥಪೂರ್ಣ ಸಂವಿಧಾನದ ವ್ಯಾಖ್ಯಾನವನ್ನು ಹುಡುಕುತ್ತಿದ್ದವು. ಆ ಕಾರಣಕ್ಕಾಗಿಯೇ ಗೌರಿ ಹತ್ಯೆಯಾದರು. ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಚರ್ಚಿಸುವ ಅಗತ್ಯವಿದೆ” ಎಂದರು.

ಇದನ್ನೂ ಓದಿ; ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...