Homeಕರ್ನಾಟಕಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

ಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

- Advertisement -
- Advertisement -

“ಭಾರತವು ಕೇಂದ್ರೀಯ ವ್ಯವಸ್ಥೆಯಲ್ಲ; ಒಕ್ಕೂಟ ವ್ಯವಸ್ಥೆ. ಯಾರೂ ಯಾರ ಮೇಲೂ ಯಾವುದನ್ನೂ ಹೇರಲು ಸಾಧ್ಯವಿಲ್ಲ” ಎಂದು ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ‘ಗಂಡಾಂತರದಲ್ಲಿ ಗಣರಾಜ್ಯ’ ಚಿಂತನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ ಅದರ ನೀತಿ ಎಂದು ಪದ್ಯ ಹೇಳುತ್ತದೆ. ಆ ಒಂದು ಪದ್ಯ, ಕರ್ನಾಟಕದ ಭೂಮಿ, ಜನರು, ವಿಶಿಷ್ಟತೆ, ಹೆಸರು, ಇರಬೇಕಾದ ಪ್ರಮುಖ ನೀತಿಗಳ ಕುರಿತು ವ್ಯಾಖ್ಯಾನ ಮಾಡುತ್ತದೆ” ಎಂದರು.

“ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವು ಸದಸ್ಯ ರಾಜ್ಯವಾಗಿದೆ. ಪ್ರತಿ ಒಕ್ಕೂಟವು ನೈಸರ್ಗಿಕವಾದ ಹಕ್ಕುಗಳನ್ನು ಹೊಂದಿರುತ್ತದೆ. ಅದರಲ್ಲಿ ಭಾಷೆಯನ್ನ ಕೇಂದ್ರೀಕರಿಸಿ, ರಾಜ್ಯವು ಸಂಘಟಿತವಾಗಬಹುದು. ಹೀಗಾಗಿಯೇ, ಸ್ವಾತಂತ್ರ್ಯ ಹೋರಾಟದ ಜೊತೆಗೆ ನಮ್ಮ ಹಿರಿಕರು ಏಕೀಕರಣ ಚಳುವಳಿಯನ್ನೂ ನಡೆಸಿದರು” ಎಂದು ವಿವರಿಸಿದರು.

“ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಏಕೀಕರಣ ಚಳುವಳಿಯಲ್ಲಿಯೂ ಭಾಗಿಯಾಗಿದ್ದರು. ಕರ್ನಾಟಕದ ರಾಷ್ಟ್ರೀಯತೆ ಬಗ್ಗೆ ನಮ್ಮ ಹಿರಿಯರು ದೇಶದ ಸ್ವಾತಂತ್ರ್ಯ ಮತ್ತು ರಾಜ್ಯದ ಏಕೀಕರಣ ಎರಡೂ ಒಟ್ಟಿಗೆ ನಡೆಯಬೇಕು ಎಂದು ಹೇಳಿದ್ದರು. ಆಲೂರು ವೆಂಕಟರಾಯರು ‘ಕರ್ನಾಟಕತ್ವದ ಸೂತ್ರಗಳು’ ಎಂದು ಪುಸ್ತಕವನ್ನು ಬರೆದಿದ್ದರು. ಅದರಲ್ಲಿ ಹಲವು ಸಮಸ್ಯೆಗಳಿದ್ದರೂ, ಅದು ಬಹಳ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ಕರ್ನಾಟಕ ಏಕೀಕರಣದ ಬಳಿಕ ಅವರು ಕರ್ನಾಟಕತ್ವದ ಬಗ್ಗೆ ಬರೆದಿದದ್ದು ಮಹತ್ವದ್ದು. ಕರ್ನಾಟಕದ ಮೂಲಕವೇ ಜಗತ್ತನ್ನು ನೋಡಬೇಕೆಂದು ಅವರು ಹೇಳಿದ್ದರು. ನಮ್ಮ ಹಿರಿಯರೂ ಕೂಡ ಅದನ್ನೇ ಹೇಳಿದ್ದರು” ಎಂದು ತಿಳಿಸಿದರು.

“ನಮ್ಮ ‘ಜನಗಣಮನ’ ಭಾರತವನ್ನು ಒಂದು ಒಕ್ಕೂಟ ಎಂದೇ ಹೇಳುತ್ತದೆ. ಭಾರತದ ಎಲ್ಲ ರಾಜ್ಯಗಳು, ಭೂಪ್ರದೇಶದ ಬಗ್ಗೆ ಠ್ಯಾಗೂರ್ ಬರೆದಿದ್ದಾರೆ. ಭಾರತದ ಸರ್ಕಾರ ಕೇಂದ್ರ ಸರ್ಕಾರವಲ್ಲ; ಒಕ್ಕೂಟ ಸರ್ಕಾರ. ಯಾರೂ ಯಾವುದೇ ರಾಜ್ಯದ ಮೇಲೆ ಯಾವುದನ್ನೂ ಹೇರಲು ಸಾಧ್ಯವಿಲ್ಲ. ಹಾಗೆ ಹೇರಲು ಯತ್ನಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ. ವಿರೋಧಿಸುವ ಹಕ್ಕು ನಮಗಿದೆ. ಕರ್ನಾಟಕವಾಗಲೀ, ಭಾರತವಾಗಲೀ ಎರಡೂ ಬೇರೆ-ಬೇರೆ ಎಂಟಿಟಿಯನ್ನು ಹೊಂದಿವೆ. ಅವುಗಳಲ್ಲಿರುವ ಸಮಾನ ಸಂಗತಿ ಎಂದರೆ, ಬಹು ಧರ್ಮೀಯ, ಬಹು ಭಾಷಿಕ, ಬಹು ಸಾಂಸ್ಕೃತಿಕ ಹಾಗೂ ಬಹು ಒಳ ಪ್ರಾಂತೀಯತೆಯನ್ನು ಹೊಂದಿವೆ. ಬಹುತ್ವವು ಶಾಪವಲ್ಲ. ಅದು ಪ್ರಜಾಪ್ರಭುತ್ವದ ಮೂಲವಾಗಿದೆ. ಬಹುತ್ವವನ್ನು ಕಳೆದುಕೊಂಡಾಗ ದೇಶವು ಸಮಸ್ಯೆಯನ್ನು ಎದುರಿಸುತ್ತದೆ” ಎಂದು ರಹಮತ್ ತರೀಕೆರೆ ಹೇಳಿದರು.

“ಕುವೆಂಪುಅವರ ‘ಸರ್ವರಿಗೂ ಸಮ ಪಾಲು–ಸರ್ವರಿಗೂ ಸಮ ಬಾಳು’ ಎಂಬುದು ಆರ್ಥಿಕವಾದ ಫೆಡರಲಿಸಂ ಅನ್ನು ವಿವರಿಸುತ್ತದೆ. ಅಂತೆಯೇ, ‘ಇಲ್ಲಿ ಯಾರೂ ಮುಖ್ಯರಲ್ಲ’ ಎಂದು ಹೇಳುವಾಗ, ಕೇವಲ ಮನುಷ್ಯರಷ್ಟೆ ಮುಖ್ಯವಲ್ಲ; ಮನುಷ್ಯೇತರ ಜೀವಿಗಳಿಗೂ ಭೂಮಿಯಲ್ಲಿ ಹಕ್ಕಿದೆ ಎಂದು ಹೇಳುತ್ತಾರೆ. ರಾಮಯಣ, ಮಹಾಭಾರತದಂತಹ ಗ್ರಂಥಗಳು ಭಾರತಕ್ಕಿರಬಹುದು. ಆದರೆ, ಕರ್ನಾಟಕಕ್ಕೆ ಅಂತಹ ಗ್ರಂಥಗಳನ್ನು ನೀಡಿದವರಲ್ಲಿ ಮೊದಲಿಗರು ಪಂಪ. ಸ್ವಂತಿಕೆಯ ಬಗ್ಗೆ ಕನ್ನಡವು ಯಾವಾಗಲೂ ಯೋಚಿಸಿದೆ. ನಮ್ಮ ತನವನ್ನು ನಾವು ಕಾಪಾಡಿಕೊಳ್ಳಬೇಕೆಂದು ಹಲವಾರು ಚಿಂತಕರು ಹೇಳಿದ್ದಾರೆ” ಎಂದು ತಿಳಿಸಿದರು.

“ಹಲವಾರು ಸಂದರ್ಭಗಳಲ್ಲಿ, ರಾಜರ ಆಳ್ವಿಕೆ ಇದ್ದಾಗ, ಬ್ರಿಟಿಷ್ ಆಳ್ವಿಕೆ ಇದ್ದಾಗ ಕನ್ನಡಿಗರ ಮೇಲೆ ಹಲವಾರು ರೀತಿಯ ಹೇರಿಕೆಗಳು ಕಂಡುಬಂದಿವೆ. ಈಗ, ಸಂಸ್ಕೃತ, ಹಿಂದಿ ಹೇರಿಕೆ ನಡೆಯುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬ ಬೋರ್ಡು ಕೆಳಗಿಳಿದು, ಎಸ್‌ಬಿಐ ಬೋರ್ಡು ಮೇಲೇರುವಾಗಲೂ ನಮ್ಮ ಮೇಲಿನ ಹೇರಿಕೆ ಕಾಣಸಿಗುತ್ತಿತ್ತು. ಇಂತಹ ಹೇರಿಕೆಗಳನ್ನು ಕನ್ನಡಿಗರು ನಿರಂತವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈಗಲೂ ವಿರೋಧಿಸುವುದು ನಡೆಯುತ್ತಲೇ ಇದೆ” ಎಂದು ವಿವರಿಸಿದರು.

“ನಮ್ಮದೆರು ಇರುವ ಈ ಸಂದರ್ಭದಲ್ಲಿ ನಾವು ಎದುರಿಸಬೇಕಿರುವ ಬಿಕ್ಕಟ್ಟಿನ ಕುರಿತು ಹೆಚ್ಚು ಚಿಂತನೆ ನಡೆಸಿದವರು ಗೌರಿ ಮತ್ತು ಕಲ್ಬುರ್ಗಿ ಅವರು. ಈ ಇಬ್ಬರೂ ಫೆಡರಲಿಸಂನ ಪ್ರತಿಪಾದಕರು. ಅವರು ಒಂದು ಧರ್ಮ, ಒಂದು ರಾಷ್ಟ್ರ, ಒಂದು ಭಾಷೆಯಂತೆ ಒಂದು ಎಂಬುದನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ಆಲೋಚನೆಗಳು ಅರ್ಥಪೂರ್ಣ ಪ್ರಜಾಪ್ರಭುತ್ವವನ್ನು, ಅರ್ಥಪೂರ್ಣ ಭಾರತವನ್ನು ಹಾಗೂ ಆರ್ಥಪೂರ್ಣ ಸಂವಿಧಾನದ ವ್ಯಾಖ್ಯಾನವನ್ನು ಹುಡುಕುತ್ತಿದ್ದವು. ಆ ಕಾರಣಕ್ಕಾಗಿಯೇ ಗೌರಿ ಹತ್ಯೆಯಾದರು. ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಚರ್ಚಿಸುವ ಅಗತ್ಯವಿದೆ” ಎಂದರು.

ಇದನ್ನೂ ಓದಿ; ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...