Homeಕರ್ನಾಟಕಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

ಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

- Advertisement -
- Advertisement -

“ಭಾರತವು ಕೇಂದ್ರೀಯ ವ್ಯವಸ್ಥೆಯಲ್ಲ; ಒಕ್ಕೂಟ ವ್ಯವಸ್ಥೆ. ಯಾರೂ ಯಾರ ಮೇಲೂ ಯಾವುದನ್ನೂ ಹೇರಲು ಸಾಧ್ಯವಿಲ್ಲ” ಎಂದು ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ‘ಗಂಡಾಂತರದಲ್ಲಿ ಗಣರಾಜ್ಯ’ ಚಿಂತನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ ಅದರ ನೀತಿ ಎಂದು ಪದ್ಯ ಹೇಳುತ್ತದೆ. ಆ ಒಂದು ಪದ್ಯ, ಕರ್ನಾಟಕದ ಭೂಮಿ, ಜನರು, ವಿಶಿಷ್ಟತೆ, ಹೆಸರು, ಇರಬೇಕಾದ ಪ್ರಮುಖ ನೀತಿಗಳ ಕುರಿತು ವ್ಯಾಖ್ಯಾನ ಮಾಡುತ್ತದೆ” ಎಂದರು.

“ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವು ಸದಸ್ಯ ರಾಜ್ಯವಾಗಿದೆ. ಪ್ರತಿ ಒಕ್ಕೂಟವು ನೈಸರ್ಗಿಕವಾದ ಹಕ್ಕುಗಳನ್ನು ಹೊಂದಿರುತ್ತದೆ. ಅದರಲ್ಲಿ ಭಾಷೆಯನ್ನ ಕೇಂದ್ರೀಕರಿಸಿ, ರಾಜ್ಯವು ಸಂಘಟಿತವಾಗಬಹುದು. ಹೀಗಾಗಿಯೇ, ಸ್ವಾತಂತ್ರ್ಯ ಹೋರಾಟದ ಜೊತೆಗೆ ನಮ್ಮ ಹಿರಿಕರು ಏಕೀಕರಣ ಚಳುವಳಿಯನ್ನೂ ನಡೆಸಿದರು” ಎಂದು ವಿವರಿಸಿದರು.

“ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಏಕೀಕರಣ ಚಳುವಳಿಯಲ್ಲಿಯೂ ಭಾಗಿಯಾಗಿದ್ದರು. ಕರ್ನಾಟಕದ ರಾಷ್ಟ್ರೀಯತೆ ಬಗ್ಗೆ ನಮ್ಮ ಹಿರಿಯರು ದೇಶದ ಸ್ವಾತಂತ್ರ್ಯ ಮತ್ತು ರಾಜ್ಯದ ಏಕೀಕರಣ ಎರಡೂ ಒಟ್ಟಿಗೆ ನಡೆಯಬೇಕು ಎಂದು ಹೇಳಿದ್ದರು. ಆಲೂರು ವೆಂಕಟರಾಯರು ‘ಕರ್ನಾಟಕತ್ವದ ಸೂತ್ರಗಳು’ ಎಂದು ಪುಸ್ತಕವನ್ನು ಬರೆದಿದ್ದರು. ಅದರಲ್ಲಿ ಹಲವು ಸಮಸ್ಯೆಗಳಿದ್ದರೂ, ಅದು ಬಹಳ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ಕರ್ನಾಟಕ ಏಕೀಕರಣದ ಬಳಿಕ ಅವರು ಕರ್ನಾಟಕತ್ವದ ಬಗ್ಗೆ ಬರೆದಿದದ್ದು ಮಹತ್ವದ್ದು. ಕರ್ನಾಟಕದ ಮೂಲಕವೇ ಜಗತ್ತನ್ನು ನೋಡಬೇಕೆಂದು ಅವರು ಹೇಳಿದ್ದರು. ನಮ್ಮ ಹಿರಿಯರೂ ಕೂಡ ಅದನ್ನೇ ಹೇಳಿದ್ದರು” ಎಂದು ತಿಳಿಸಿದರು.

“ನಮ್ಮ ‘ಜನಗಣಮನ’ ಭಾರತವನ್ನು ಒಂದು ಒಕ್ಕೂಟ ಎಂದೇ ಹೇಳುತ್ತದೆ. ಭಾರತದ ಎಲ್ಲ ರಾಜ್ಯಗಳು, ಭೂಪ್ರದೇಶದ ಬಗ್ಗೆ ಠ್ಯಾಗೂರ್ ಬರೆದಿದ್ದಾರೆ. ಭಾರತದ ಸರ್ಕಾರ ಕೇಂದ್ರ ಸರ್ಕಾರವಲ್ಲ; ಒಕ್ಕೂಟ ಸರ್ಕಾರ. ಯಾರೂ ಯಾವುದೇ ರಾಜ್ಯದ ಮೇಲೆ ಯಾವುದನ್ನೂ ಹೇರಲು ಸಾಧ್ಯವಿಲ್ಲ. ಹಾಗೆ ಹೇರಲು ಯತ್ನಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ. ವಿರೋಧಿಸುವ ಹಕ್ಕು ನಮಗಿದೆ. ಕರ್ನಾಟಕವಾಗಲೀ, ಭಾರತವಾಗಲೀ ಎರಡೂ ಬೇರೆ-ಬೇರೆ ಎಂಟಿಟಿಯನ್ನು ಹೊಂದಿವೆ. ಅವುಗಳಲ್ಲಿರುವ ಸಮಾನ ಸಂಗತಿ ಎಂದರೆ, ಬಹು ಧರ್ಮೀಯ, ಬಹು ಭಾಷಿಕ, ಬಹು ಸಾಂಸ್ಕೃತಿಕ ಹಾಗೂ ಬಹು ಒಳ ಪ್ರಾಂತೀಯತೆಯನ್ನು ಹೊಂದಿವೆ. ಬಹುತ್ವವು ಶಾಪವಲ್ಲ. ಅದು ಪ್ರಜಾಪ್ರಭುತ್ವದ ಮೂಲವಾಗಿದೆ. ಬಹುತ್ವವನ್ನು ಕಳೆದುಕೊಂಡಾಗ ದೇಶವು ಸಮಸ್ಯೆಯನ್ನು ಎದುರಿಸುತ್ತದೆ” ಎಂದು ರಹಮತ್ ತರೀಕೆರೆ ಹೇಳಿದರು.

“ಕುವೆಂಪುಅವರ ‘ಸರ್ವರಿಗೂ ಸಮ ಪಾಲು–ಸರ್ವರಿಗೂ ಸಮ ಬಾಳು’ ಎಂಬುದು ಆರ್ಥಿಕವಾದ ಫೆಡರಲಿಸಂ ಅನ್ನು ವಿವರಿಸುತ್ತದೆ. ಅಂತೆಯೇ, ‘ಇಲ್ಲಿ ಯಾರೂ ಮುಖ್ಯರಲ್ಲ’ ಎಂದು ಹೇಳುವಾಗ, ಕೇವಲ ಮನುಷ್ಯರಷ್ಟೆ ಮುಖ್ಯವಲ್ಲ; ಮನುಷ್ಯೇತರ ಜೀವಿಗಳಿಗೂ ಭೂಮಿಯಲ್ಲಿ ಹಕ್ಕಿದೆ ಎಂದು ಹೇಳುತ್ತಾರೆ. ರಾಮಯಣ, ಮಹಾಭಾರತದಂತಹ ಗ್ರಂಥಗಳು ಭಾರತಕ್ಕಿರಬಹುದು. ಆದರೆ, ಕರ್ನಾಟಕಕ್ಕೆ ಅಂತಹ ಗ್ರಂಥಗಳನ್ನು ನೀಡಿದವರಲ್ಲಿ ಮೊದಲಿಗರು ಪಂಪ. ಸ್ವಂತಿಕೆಯ ಬಗ್ಗೆ ಕನ್ನಡವು ಯಾವಾಗಲೂ ಯೋಚಿಸಿದೆ. ನಮ್ಮ ತನವನ್ನು ನಾವು ಕಾಪಾಡಿಕೊಳ್ಳಬೇಕೆಂದು ಹಲವಾರು ಚಿಂತಕರು ಹೇಳಿದ್ದಾರೆ” ಎಂದು ತಿಳಿಸಿದರು.

“ಹಲವಾರು ಸಂದರ್ಭಗಳಲ್ಲಿ, ರಾಜರ ಆಳ್ವಿಕೆ ಇದ್ದಾಗ, ಬ್ರಿಟಿಷ್ ಆಳ್ವಿಕೆ ಇದ್ದಾಗ ಕನ್ನಡಿಗರ ಮೇಲೆ ಹಲವಾರು ರೀತಿಯ ಹೇರಿಕೆಗಳು ಕಂಡುಬಂದಿವೆ. ಈಗ, ಸಂಸ್ಕೃತ, ಹಿಂದಿ ಹೇರಿಕೆ ನಡೆಯುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬ ಬೋರ್ಡು ಕೆಳಗಿಳಿದು, ಎಸ್‌ಬಿಐ ಬೋರ್ಡು ಮೇಲೇರುವಾಗಲೂ ನಮ್ಮ ಮೇಲಿನ ಹೇರಿಕೆ ಕಾಣಸಿಗುತ್ತಿತ್ತು. ಇಂತಹ ಹೇರಿಕೆಗಳನ್ನು ಕನ್ನಡಿಗರು ನಿರಂತವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈಗಲೂ ವಿರೋಧಿಸುವುದು ನಡೆಯುತ್ತಲೇ ಇದೆ” ಎಂದು ವಿವರಿಸಿದರು.

“ನಮ್ಮದೆರು ಇರುವ ಈ ಸಂದರ್ಭದಲ್ಲಿ ನಾವು ಎದುರಿಸಬೇಕಿರುವ ಬಿಕ್ಕಟ್ಟಿನ ಕುರಿತು ಹೆಚ್ಚು ಚಿಂತನೆ ನಡೆಸಿದವರು ಗೌರಿ ಮತ್ತು ಕಲ್ಬುರ್ಗಿ ಅವರು. ಈ ಇಬ್ಬರೂ ಫೆಡರಲಿಸಂನ ಪ್ರತಿಪಾದಕರು. ಅವರು ಒಂದು ಧರ್ಮ, ಒಂದು ರಾಷ್ಟ್ರ, ಒಂದು ಭಾಷೆಯಂತೆ ಒಂದು ಎಂಬುದನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ಆಲೋಚನೆಗಳು ಅರ್ಥಪೂರ್ಣ ಪ್ರಜಾಪ್ರಭುತ್ವವನ್ನು, ಅರ್ಥಪೂರ್ಣ ಭಾರತವನ್ನು ಹಾಗೂ ಆರ್ಥಪೂರ್ಣ ಸಂವಿಧಾನದ ವ್ಯಾಖ್ಯಾನವನ್ನು ಹುಡುಕುತ್ತಿದ್ದವು. ಆ ಕಾರಣಕ್ಕಾಗಿಯೇ ಗೌರಿ ಹತ್ಯೆಯಾದರು. ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಚರ್ಚಿಸುವ ಅಗತ್ಯವಿದೆ” ಎಂದರು.

ಇದನ್ನೂ ಓದಿ; ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...