Homeಕರ್ನಾಟಕಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

ಭಾರತ ಒಕ್ಕೂಟ ವ್ಯವಸ್ಥೆ; ಯಾವುದನ್ನೂ ಹೇರಲು ಸಾಧ್ಯವಿಲ್ಲ: ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ

- Advertisement -
- Advertisement -

“ಭಾರತವು ಕೇಂದ್ರೀಯ ವ್ಯವಸ್ಥೆಯಲ್ಲ; ಒಕ್ಕೂಟ ವ್ಯವಸ್ಥೆ. ಯಾರೂ ಯಾರ ಮೇಲೂ ಯಾವುದನ್ನೂ ಹೇರಲು ಸಾಧ್ಯವಿಲ್ಲ” ಎಂದು ಸಾಮಾಜಿಕ ಚಿಂತಕ ಪ್ರೊ. ರಹಮತ್ ತರೀಕೆರೆ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ‘ಗಂಡಾಂತರದಲ್ಲಿ ಗಣರಾಜ್ಯ’ ಚಿಂತನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ ಅದರ ನೀತಿ ಎಂದು ಪದ್ಯ ಹೇಳುತ್ತದೆ. ಆ ಒಂದು ಪದ್ಯ, ಕರ್ನಾಟಕದ ಭೂಮಿ, ಜನರು, ವಿಶಿಷ್ಟತೆ, ಹೆಸರು, ಇರಬೇಕಾದ ಪ್ರಮುಖ ನೀತಿಗಳ ಕುರಿತು ವ್ಯಾಖ್ಯಾನ ಮಾಡುತ್ತದೆ” ಎಂದರು.

“ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವು ಸದಸ್ಯ ರಾಜ್ಯವಾಗಿದೆ. ಪ್ರತಿ ಒಕ್ಕೂಟವು ನೈಸರ್ಗಿಕವಾದ ಹಕ್ಕುಗಳನ್ನು ಹೊಂದಿರುತ್ತದೆ. ಅದರಲ್ಲಿ ಭಾಷೆಯನ್ನ ಕೇಂದ್ರೀಕರಿಸಿ, ರಾಜ್ಯವು ಸಂಘಟಿತವಾಗಬಹುದು. ಹೀಗಾಗಿಯೇ, ಸ್ವಾತಂತ್ರ್ಯ ಹೋರಾಟದ ಜೊತೆಗೆ ನಮ್ಮ ಹಿರಿಕರು ಏಕೀಕರಣ ಚಳುವಳಿಯನ್ನೂ ನಡೆಸಿದರು” ಎಂದು ವಿವರಿಸಿದರು.

“ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಏಕೀಕರಣ ಚಳುವಳಿಯಲ್ಲಿಯೂ ಭಾಗಿಯಾಗಿದ್ದರು. ಕರ್ನಾಟಕದ ರಾಷ್ಟ್ರೀಯತೆ ಬಗ್ಗೆ ನಮ್ಮ ಹಿರಿಯರು ದೇಶದ ಸ್ವಾತಂತ್ರ್ಯ ಮತ್ತು ರಾಜ್ಯದ ಏಕೀಕರಣ ಎರಡೂ ಒಟ್ಟಿಗೆ ನಡೆಯಬೇಕು ಎಂದು ಹೇಳಿದ್ದರು. ಆಲೂರು ವೆಂಕಟರಾಯರು ‘ಕರ್ನಾಟಕತ್ವದ ಸೂತ್ರಗಳು’ ಎಂದು ಪುಸ್ತಕವನ್ನು ಬರೆದಿದ್ದರು. ಅದರಲ್ಲಿ ಹಲವು ಸಮಸ್ಯೆಗಳಿದ್ದರೂ, ಅದು ಬಹಳ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ಕರ್ನಾಟಕ ಏಕೀಕರಣದ ಬಳಿಕ ಅವರು ಕರ್ನಾಟಕತ್ವದ ಬಗ್ಗೆ ಬರೆದಿದದ್ದು ಮಹತ್ವದ್ದು. ಕರ್ನಾಟಕದ ಮೂಲಕವೇ ಜಗತ್ತನ್ನು ನೋಡಬೇಕೆಂದು ಅವರು ಹೇಳಿದ್ದರು. ನಮ್ಮ ಹಿರಿಯರೂ ಕೂಡ ಅದನ್ನೇ ಹೇಳಿದ್ದರು” ಎಂದು ತಿಳಿಸಿದರು.

“ನಮ್ಮ ‘ಜನಗಣಮನ’ ಭಾರತವನ್ನು ಒಂದು ಒಕ್ಕೂಟ ಎಂದೇ ಹೇಳುತ್ತದೆ. ಭಾರತದ ಎಲ್ಲ ರಾಜ್ಯಗಳು, ಭೂಪ್ರದೇಶದ ಬಗ್ಗೆ ಠ್ಯಾಗೂರ್ ಬರೆದಿದ್ದಾರೆ. ಭಾರತದ ಸರ್ಕಾರ ಕೇಂದ್ರ ಸರ್ಕಾರವಲ್ಲ; ಒಕ್ಕೂಟ ಸರ್ಕಾರ. ಯಾರೂ ಯಾವುದೇ ರಾಜ್ಯದ ಮೇಲೆ ಯಾವುದನ್ನೂ ಹೇರಲು ಸಾಧ್ಯವಿಲ್ಲ. ಹಾಗೆ ಹೇರಲು ಯತ್ನಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ. ವಿರೋಧಿಸುವ ಹಕ್ಕು ನಮಗಿದೆ. ಕರ್ನಾಟಕವಾಗಲೀ, ಭಾರತವಾಗಲೀ ಎರಡೂ ಬೇರೆ-ಬೇರೆ ಎಂಟಿಟಿಯನ್ನು ಹೊಂದಿವೆ. ಅವುಗಳಲ್ಲಿರುವ ಸಮಾನ ಸಂಗತಿ ಎಂದರೆ, ಬಹು ಧರ್ಮೀಯ, ಬಹು ಭಾಷಿಕ, ಬಹು ಸಾಂಸ್ಕೃತಿಕ ಹಾಗೂ ಬಹು ಒಳ ಪ್ರಾಂತೀಯತೆಯನ್ನು ಹೊಂದಿವೆ. ಬಹುತ್ವವು ಶಾಪವಲ್ಲ. ಅದು ಪ್ರಜಾಪ್ರಭುತ್ವದ ಮೂಲವಾಗಿದೆ. ಬಹುತ್ವವನ್ನು ಕಳೆದುಕೊಂಡಾಗ ದೇಶವು ಸಮಸ್ಯೆಯನ್ನು ಎದುರಿಸುತ್ತದೆ” ಎಂದು ರಹಮತ್ ತರೀಕೆರೆ ಹೇಳಿದರು.

“ಕುವೆಂಪುಅವರ ‘ಸರ್ವರಿಗೂ ಸಮ ಪಾಲು–ಸರ್ವರಿಗೂ ಸಮ ಬಾಳು’ ಎಂಬುದು ಆರ್ಥಿಕವಾದ ಫೆಡರಲಿಸಂ ಅನ್ನು ವಿವರಿಸುತ್ತದೆ. ಅಂತೆಯೇ, ‘ಇಲ್ಲಿ ಯಾರೂ ಮುಖ್ಯರಲ್ಲ’ ಎಂದು ಹೇಳುವಾಗ, ಕೇವಲ ಮನುಷ್ಯರಷ್ಟೆ ಮುಖ್ಯವಲ್ಲ; ಮನುಷ್ಯೇತರ ಜೀವಿಗಳಿಗೂ ಭೂಮಿಯಲ್ಲಿ ಹಕ್ಕಿದೆ ಎಂದು ಹೇಳುತ್ತಾರೆ. ರಾಮಯಣ, ಮಹಾಭಾರತದಂತಹ ಗ್ರಂಥಗಳು ಭಾರತಕ್ಕಿರಬಹುದು. ಆದರೆ, ಕರ್ನಾಟಕಕ್ಕೆ ಅಂತಹ ಗ್ರಂಥಗಳನ್ನು ನೀಡಿದವರಲ್ಲಿ ಮೊದಲಿಗರು ಪಂಪ. ಸ್ವಂತಿಕೆಯ ಬಗ್ಗೆ ಕನ್ನಡವು ಯಾವಾಗಲೂ ಯೋಚಿಸಿದೆ. ನಮ್ಮ ತನವನ್ನು ನಾವು ಕಾಪಾಡಿಕೊಳ್ಳಬೇಕೆಂದು ಹಲವಾರು ಚಿಂತಕರು ಹೇಳಿದ್ದಾರೆ” ಎಂದು ತಿಳಿಸಿದರು.

“ಹಲವಾರು ಸಂದರ್ಭಗಳಲ್ಲಿ, ರಾಜರ ಆಳ್ವಿಕೆ ಇದ್ದಾಗ, ಬ್ರಿಟಿಷ್ ಆಳ್ವಿಕೆ ಇದ್ದಾಗ ಕನ್ನಡಿಗರ ಮೇಲೆ ಹಲವಾರು ರೀತಿಯ ಹೇರಿಕೆಗಳು ಕಂಡುಬಂದಿವೆ. ಈಗ, ಸಂಸ್ಕೃತ, ಹಿಂದಿ ಹೇರಿಕೆ ನಡೆಯುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬ ಬೋರ್ಡು ಕೆಳಗಿಳಿದು, ಎಸ್‌ಬಿಐ ಬೋರ್ಡು ಮೇಲೇರುವಾಗಲೂ ನಮ್ಮ ಮೇಲಿನ ಹೇರಿಕೆ ಕಾಣಸಿಗುತ್ತಿತ್ತು. ಇಂತಹ ಹೇರಿಕೆಗಳನ್ನು ಕನ್ನಡಿಗರು ನಿರಂತವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈಗಲೂ ವಿರೋಧಿಸುವುದು ನಡೆಯುತ್ತಲೇ ಇದೆ” ಎಂದು ವಿವರಿಸಿದರು.

“ನಮ್ಮದೆರು ಇರುವ ಈ ಸಂದರ್ಭದಲ್ಲಿ ನಾವು ಎದುರಿಸಬೇಕಿರುವ ಬಿಕ್ಕಟ್ಟಿನ ಕುರಿತು ಹೆಚ್ಚು ಚಿಂತನೆ ನಡೆಸಿದವರು ಗೌರಿ ಮತ್ತು ಕಲ್ಬುರ್ಗಿ ಅವರು. ಈ ಇಬ್ಬರೂ ಫೆಡರಲಿಸಂನ ಪ್ರತಿಪಾದಕರು. ಅವರು ಒಂದು ಧರ್ಮ, ಒಂದು ರಾಷ್ಟ್ರ, ಒಂದು ಭಾಷೆಯಂತೆ ಒಂದು ಎಂಬುದನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ಆಲೋಚನೆಗಳು ಅರ್ಥಪೂರ್ಣ ಪ್ರಜಾಪ್ರಭುತ್ವವನ್ನು, ಅರ್ಥಪೂರ್ಣ ಭಾರತವನ್ನು ಹಾಗೂ ಆರ್ಥಪೂರ್ಣ ಸಂವಿಧಾನದ ವ್ಯಾಖ್ಯಾನವನ್ನು ಹುಡುಕುತ್ತಿದ್ದವು. ಆ ಕಾರಣಕ್ಕಾಗಿಯೇ ಗೌರಿ ಹತ್ಯೆಯಾದರು. ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಾವು ಚರ್ಚಿಸುವ ಅಗತ್ಯವಿದೆ” ಎಂದರು.

ಇದನ್ನೂ ಓದಿ; ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...