Homeಚಳವಳಿಪ್ರತ್ಯೇಕವಾಗುಳಿವುದ ನಿಲ್ಲಿಸಿ ಜೊತೆಗೂಡಿದರೆ, ನಾವೇ ಈ ದೇಶದ ಬಲಶಾಲಿ ಬಹುಸಂಖ್ಯಾತರು

ಪ್ರತ್ಯೇಕವಾಗುಳಿವುದ ನಿಲ್ಲಿಸಿ ಜೊತೆಗೂಡಿದರೆ, ನಾವೇ ಈ ದೇಶದ ಬಲಶಾಲಿ ಬಹುಸಂಖ್ಯಾತರು

- Advertisement -
- Advertisement -

ತೆಲಂಗಾಣದ ಸುಜಾತಾ ಸೂರೆಪಲ್ಲಿ ಸುಸ್ತೇ ಆಗದ ದಿಟ್ಟ ಹೋರಾಟಗಾರ್ತಿ ಎಂದು ಹೆಸರು ಪಡೆದವರು. ಬಿಎಸ್‍ಪಿ ಪಕ್ಷದಿಂದ ಒಮ್ಮೆ ಚುನಾವಣೆಗೂ ಸ್ಪರ್ಧಿಸಿದ್ದ ಆಕೆ, ಜಾತಿ ದೌರ್ಜನ್ಯ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧ ನಿರಂತರ ಹೋರಾಡುತ್ತಿರುವವರು. ಬರಹಗಾರ್ತಿ ಮತ್ತು ಪರಿಸರ ಸಂಬಂಧಿ ಆಂದೋಲನಗಳಲ್ಲೂ ಅವರು ಸಕ್ರಿಯರು. ಶಾತವಾಹನ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರವನ್ನು ಬೋಧಿಸುವ ಸುಜಾತಾ ಅವರು ತಮ್ಮ ನಿಲುವುಗಳಿಗಾಗಿ ಬಲಪಂಥೀಯರಿಂದ ಟ್ರೋಲ್‍ಗೂ ಒಳಗಾಗಿದ್ದರು ಈ ಲೇಖನವನ್ನು ಕನ್ನಡಕ್ಕೆ ಮಲ್ಲಿಗೆ ಸಿರಿಮನೆಯವರು ಅನುವಾದಿಸಿದ್ದಾರೆ.

ಆಗಸ್ಟ್ 15ರಂದು ಮೋದಿ `ಒಂದು ರಾಷ್ಟ್ರ, ಒಂದು ಗ್ರಿಡ್’ (ಬಹುಶಃ ಒಂದು ಧರ್ಮ ಎಂಬುದು ನೇರವಾಗಿ ಉಚ್ಚರಿಸದಿರುವ ಪದ ಇರಬಹುದು) ಎಂದು ಹೇಳಿದರು. ಇದು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು ಮತ್ತು ನಮ್ಮೆಲ್ಲರಿಗೆ ಒಂದು ಎಚ್ಚರಿಕೆಯೆಂದು ಭಾವಿಸಬೇಕಾದದ್ದು.

ಭಾರತ ಈಗ ಕಷ್ಟಕಾಲದ ಮೂಲಕ ಹಾದುಹೋಗುತ್ತಿದೆ. ಭಾರತದ ಸನ್ನಿವೇಶವನ್ನು ಮೋದಿಗು ಮೊದಲು ಮತ್ತು ಮೋದಿಯ ನಂತರ ಎಂದು ನಾವು ವಿಭಾಗಿಸಿಕೊಂಡು ಅರ್ಥಮಾಡಿಕೊಳ್ಳಬೇಕು. ಈ ಅವಧಿಯಲ್ಲಿ ನಾವು ಗೌರಿ ಲಂಕೇಶ್ ಮತ್ತು ಅವರಂತಹ ಅನೇಕ ಅನೇಕ ದಿಟ್ಟ ಹೋರಾಟಗಾರರನ್ನು ಕಳೆದುಕೊಂಡೆವು. ಗೌರಿ ಧರ್ಮದ ದಬ್ಬಾಳಿಕೆಯನ್ನು ಪ್ರಶ್ನಿಸಿದರು; ಇಂದಿನ ಕಾಲದಲ್ಲಿ ಸಹಿಸಲಸಾಧ್ಯವೆನ್ನಿಸಿಕೊಳ್ಳುವಂತಹ ಹಲವು ವಿಷಯಗಳ ಬಗ್ಗೆ ದಿಟ್ಟವಾಗಿ ಬರೆದರು ಮಾತ್ರವಲ್ಲ, ಒಂಟಿಗೈಯ್ಯಲ್ಲಿ ಅನೇಕ ಮೂಲಭೂತ ವಿಚಾರಗಳಿಗಾಗಿ ಹೋರಾಟ ನಡೆಸಿದರು.

ಇಂದು ರಾಜಕೀಯ ಅಧಿಕಾರ ಪಡೆದ ನಂತರ ಹಿಂದುತ್ವವು ಸಮಾಜದ ಎಲ್ಲ ಸ್ತರಗಳ ಜನರಲ್ಲೂ ಬೇರೂರಿಬಿಟ್ಟಿದೆ. ಅದಕ್ಕಿಂತ ಭಿನ್ನವಾಗಿ ಆಲೋಚಿಸುವವರನ್ನು ಒಂದೋ ಒಳಗೆ ಹಾಕಿಕೊಳ್ಳಲು ನೋಡುತ್ತಿದ್ದಾರೆ ಅಥವಾ ಕೊಲ್ಲುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ದುಸ್ಥಿತಿ ತಲುಪಿರುವ ಜನರು ಸ್ಥಳೀಯ ಸಂಘಟನೆಗಳ ನೆರವು ಪಡೆಯಲು ನೋಡುತ್ತಿದ್ದಾರೆ. ಆದರೆ ಬಹುಪಾಲು ಸಂಘಟನೆಗಳು ಕೇಸರಿ ವಿಷ ತುಂಬಿಕೊಂಡಿವೆ. ನೋಟು ರದ್ಧತಿ ಮತ್ತು ಜಿಎಸ್‍ಟಿಯು ಭಾರೀ ಶ್ರೀಮಂತರಿಗೆ ಅನುಕೂಲ ಮಾಡಿಕೊಡುತ್ತಾ ಕೆಳ ಮತ್ತು ಮಧ್ಯಮ ವರ್ಗವನ್ನು ಹೆಚ್ಚೂಕಡಿಮೆ ಕೊಂದೇ ಬಿಟ್ಟಿದೆ. ಪುಲ್ವಾಮಾ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್‍ಗಳು ರಾಜಕೀಯ ಅಧಿಕಾರ ಪಡೆಯಲು ದಾರಿ ಮಾಡಿಕೊಟ್ಟವು. ಇದರಿಂದಾಗಿ ಕಾಶ್ಮೀರದ ಪ್ರಜಾತಂತ್ರದ ಮೇಲೆ ದಾಳಿ ಮಾಡಲು, 370ನೇ ವಿಧಿಯನ್ನು ಕಿತ್ತು ಹಾಕಲು ಸಾಧ್ಯವಾಯಿತು. ಇಷ್ಟೆಲ್ಲ ನಡೆದರೂ ಬಹುಸಂಖ್ಯಾತರ ಮೌನವು ಆತಂಕ ಹುಟ್ಟಿಸುವಂತಿದೆ. ಭಾರತದ ನಿಜವಾದ ಗುಣ ಇದಾಗಿರಲಿಲ್ಲ!

ನಮಗೆ ಭಾರತದ ಬಗ್ಗೆ ಹೆಮ್ಮೆ ಇತ್ತು; ಅದರ `ವಿವಿಧತೆಯಲ್ಲಿ ಏಕತೆ’ಯ ಕಾರಣಕ್ಕಲ್ಲ, ಬದಲಿಗೆ ಅದರ ನಿಜವಾದ ಬಹುತ್ವದ ಗುಣದ ಕಾರಣಕ್ಕೆ. ಈ ಬಹುತ್ವವೇ ನಮ್ಮ ಸಂವಿಧಾನಗಳಲ್ಲಿ ಅಡಕಗೊಂಡಿರುವುದು ಮತ್ತು ಅದಕ್ಕಾಗಿ ಭಾರತದ ಈ ಗುಣವನ್ನೇ ನಾವೆಲ್ಲ ಕಲಿತದ್ದು ಮತ್ತು ಬದುಕಿದ್ದು. ದಾರ್ಶನಿಕ ಮತ್ತು ಮಾನವ ಹಕ್ಕುಗಳ ದಂತಕಥೆ, ಡಾ.ಬಾಬಾ ಸಾಹೇಬರು ತಮ್ಮ ಬದುಕಿನುದ್ದಕ್ಕೂ ಹಲವು ಬಗೆಯ ಸಿದ್ಧಾಂತಗಳ ಜೊತೆ ಪ್ರಯೋಗಗಳನ್ನು ನಡೆಸಿದ್ದು ಈ ನಿಟ್ಟಿನಲ್ಲಿ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳ ಜೊತೆ. ಭಾರತದ ಬಹುಸಂಖ್ಯಾತ ಜನರಿಗೆ, ತಮ್ಮನ್ನು ಹಿಂದುತ್ವದ ಸಾಂಸ್ಕೃತಿಕ ದಬ್ಬಾಳಿಕೆಯಿಂದ ರಕ್ಷಿಸುವ ಏಕೈಕ ಆಸರೆಯೆಂದರೆ ಬಾಬಾಸಾಹೇಬರ ಸಂವಿಧಾನ ಮಾತ್ರ.

ಜಾತಿಯ ದಬ್ಬಾಳಿಕೆಯ ಕುರಿತು ಮಾತನಾಡದಿದ್ದರೆ ಭಾರತದ ಚಿತ್ರಣ ಅಪೂರ್ಣವಾಗುತ್ತದೆ. ಈಗ ಜಾತಿ ಕ್ರೌರ್ಯವೆಂಬುದು ಕೇವಲ ಬಡ, ಶೋಷಿತ, ಹಳ್ಳಿಗಳ ದಲಿತರ ಮೇಲೆ ಮಾತ್ರ ನಡೆಯುತ್ತಿರುವಂಥದ್ದಾಗಿ ಉಳಿದಿಲ್ಲ. ಹೈದರಾಬಾದ್ ಕೇಂದ್ರೀಯ ವಿವಿಯಲ್ಲಿ ರೋಹಿತ್ ವೇಮುಲನ ಕ್ರೂರವಾದ ಕೊಲೆಯನ್ನು (ನಾವು ಅದನ್ನು ಆತ್ಮಹತ್ಯೆಯೆಂದು ಕರೆಯುವುದಿಲ್ಲ), ಪೆರುಮಲ್ಲ ಪ್ರಣಯ್ ಎಂಬ ಯುವಕ ವೈಶ್ಯ ಸಮುದಾಯದ ಯುವತಿಯನ್ನು ಮದುವೆಯಾದದ್ದಕ್ಕಾಗಿ ಪ್ರಾಣ ತೆತ್ತದ್ದನ್ನು ನೋಡಿದರೆ, ಜಾತಿಯನ್ನು ಪ್ರಶ್ನಿಸುವ ವಿದ್ಯಾವಂತರನ್ನೂ, ರಾಜಕೀಯ ತಿಳಿವಳಿಕೆ ಉಳ್ಳವರನ್ನೂ ಬಿಡದೆ ಅದು ಬಲಿಪಡೆಯುತ್ತದೆಂದು ಒಪ್ಪಬೇಕಾಗುತ್ತದೆ. ಶೋಷಿತರ ಪರವಾಗಿ ದನಿಯೆತ್ತಿದ್ದಕ್ಕಾಗಿ ಇಂದು ದಲಿತರು ಬಲಿಯಾಗುತ್ತಿದ್ದಾರೆ. ದಲಿತ ಹೋರಾಟಗಾರ ಚಂದ್ರಶೇಖರ್ ಆಜಾದರ ಬಂಧನ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಚಿಂತಕರು, ಬುದ್ಧಿಜೀವಿಗಳು, ವಕೀಲರು ಮತ್ತು ಹೋರಾಟಗಾರರ ಬಂಧನವಾಗುತ್ತಿರುವುದು ಸಮಾಜದಲ್ಲಿ ಪ್ರಜಾತಾಂತ್ರಿಕ ಮೌಲ್ಯಗಳು ಬಿಕ್ಕಟ್ಟಿನಲ್ಲಿರುವುದನ್ನು ತೋರುತ್ತದೆ. ದಲಿತ ಮತ್ತು ಮುಸ್ಲಿಂ ಸಮುದಾಯಗಳನ್ನು ಕೇವಲ ಗೋವಿನ ಹೆಸರಿನಲ್ಲಷ್ಟೇ ಅಲ್ಲ, ಶ್ರೀರಾಮನ ಜಯಘೋಷ ಮಾಡಲಿಲ್ಲವೆಂದೂ ಕೂಡಾ ದಾಳಿಗಳಿಗೆ ಗುರಿಮಾಡಲಾಗುತ್ತಿದೆ. ಜಾರ್ಖಂಡದ ಘಟನೆ, ಅನ್ಸಾರಿಯ ಸಾವನ್ನು ನಾವು ಇನ್ನೂ ಮರೆತಿಲ್ಲ.

ತೆಲಂಗಾಣದ ವಿಷಯಕ್ಕೆ ಬಂದರೆ, ಈ ನಾಡು ಸಾಂಸ್ಕೃತಿಕ ಮತ್ತು ಧಾರ್ಮಿಕ ಬಹುತ್ವದ ಪರಂಪರೆಯುಳ್ಳ ಪ್ರದೇಶ. ಹೋರಾಟಗಳ ತವರು, ಸ್ವಾಭಿಮಾನ ಚಳವಳಿಯ ನೆಲ, ಭೂಮಿ ಮತ್ತು ಬದುಕಿನ ಸಂಘರ್ಷದ ಸ್ಥಳವಾಗಿ ಪ್ರಸಿದ್ಧಿ ಪಡೆದಿತ್ತು. ಆದರೆ, ಸ್ವತಂತ್ರ ರಾಜ್ಯ ನಿರ್ಮಾಣದ ನಂತರ ಇಲ್ಲಿನ ಸಾಮಾನ್ಯ ಜನರ ಮೇಲಿನ ಶೋಷಣೆ ಹಲವು ಪಟ್ಟು ಹೆಚ್ಚಿದೆ. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಬರೆದರೆಂಬ ಕಾರಣಕ್ಕೆ ಹೋರಾಟಗಾರರನ್ನು ಬಂಧಿಸಲಾಗಿದೆ, ವಿದ್ಯಾರ್ಥಿಗಳನ್ನು ಮೂರನೇ ದರ್ಜೆ ಶಿಕ್ಷೆಗೆ ಗುರಿಪಡಿಸಲಾಗಿದೆ. ಇತ್ತೀಚಿನವರೆಗೆ ಅಸಾಧ್ಯವಾಗಿದ್ದ ಬಿಜೆಪಿಯ ಪ್ರವೇಶ ಆಳುತ್ತಿರುವ ಪಕ್ಷದ ಮೂಲಕವೇ ರಾಜಕೀಯ ವಾತಾವರಣದೊಳಗೆ ಸಾಧ್ಯವಾಗುತ್ತಿದೆ. ಹೆಸರುಗಳು ಬೇರೆಬೇರೆಯಾದರೂ ಎಲ್ಲ ಪಕ್ಷಗಳೂ ಜಾತಿ-ವರ್ಗ ದಮನವನ್ನು ನಡೆಸುವುದರಲ್ಲಿ ಒಂದೇ ಬಗೆಯ ನೀತಿಗಳನ್ನು ಅನುಸರಿಸುತ್ತಿವೆ. ಬಹುಜನರ ಹೆಸರಿಟ್ಟುಕೊಂಡ ಪಕ್ಷಗಳೂ ಇದಕ್ಕೆ ಹೊರತಾಗಿಲ್ಲ. ಮುಂದೊಂದು ದಿನ ಈ ಎಲ್ಲ ಪಕ್ಷಗಳೂ ತಮ್ಮ ಸ್ವಾರ್ಥಸಾಧನೆಗಾಗಿ ಒಗ್ಗೂಡಿ ಕೆಲಸ ಮಾಡಿದರೆ ಆಶ್ಚರ್ಯವೇನೂ ಇಲ್ಲ!

ತೆಲಂಗಾಣ ರಾಜ್ಯವೂ ಈಗ ಪೂರ್ತಿ ಮೋದಿ ಸರ್ಕಾರದ ಮಾದರಿಯಲ್ಲೇ ಆಳ್ವಿಕೆ ನಡೆಸುತ್ತಿದೆ. ಬಹುಸಂಖ್ಯಾತರನ್ನು ಅವರ ಪಾಲಿನ ಸಂಪನ್ಮೂಲಗಳನ್ನು ಪಡೆಯಲು ಬಿಡದೆ ವಂಚಿಸಲಾಗುತ್ತಿದೆ; ಬಹುರಾಷ್ಟ್ರೀಯ ಕಂಪನಿಗಳನ್ನು ಮುಕ್ತವಾಗಿ ಆಹ್ವಾನಿಸಲಾಗುತ್ತಿದೆ, ಸಶಸ್ತ್ರ ಪಡೆಗಳನ್ನು ಬಲಗೊಳಿಸುತ್ತಿದೆ ಮತ್ತು ಭಿನ್ನದನಿಗಳನ್ನು ಅಡಗಿಸಲು ನೋಡುತ್ತಿದೆ. ಈಗ ಅವರ ಮುಖ್ಯ ಉದ್ದೇಶವೇ ಆದಾಯ ಸೃಷ್ಟಿಯ ನೆಪದಲ್ಲಿ ನೈಸರ್ಗಿಕ ಸಂಪನ್ಮೂಲಗಳನ್ನು ಖಾಸಗೀಕರಿಸುವುದು, ಯುರೇನಿಯಮ್ ಗಣಿಗಾರಿಕೆಯನ್ನು ಪ್ರೋತ್ಸಾಹಿಸುವುದು ಮೊದಲಾದವಾಗಿವೆ. ಒಂದು ಇಡೀ ಅವಧಿಯ ಆಳ್ವಿಕೆಯ ನಂತರವೂ ಟಿಆರ್‌ಎಸ್ ತನ್ನ ವಾಗ್ದಾನಗಳನ್ನು ಈಡೇರಿಸಲು ವಿಫಲವಾಗಿದೆ ಮಾತ್ರವಲ್ಲ, ಕುಟುಂಬ ಮತ್ತು ದಬ್ಬಾಳಿಕೆಯ ರಾಜಕಾರಣ ನಡೆಸುತ್ತಾ ರಾಜ್ಯವನ್ನು ಸಂಪೂರ್ಣ ಕಡುಬಡತನಕ್ಕೆ ದೂಡಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ನಿರ್ಲಕ್ಷಿಸಲ್ಪಟ್ಟಿವೆ. ಒಟ್ಟಿನಲ್ಲಿ, ಅಮಾಯಕರನ್ನು ಕೊಲ್ಲುವುದರಲ್ಲಿ, ಹೋರಾಟಗಾರರನ್ನು ಬಂಧಿಸುವುದರಲ್ಲಿ ಮತ್ತು ಹಿಂದುತ್ವವನ್ನು ಹರಡುವುದರಲ್ಲಿ ಕೇಂದ್ರ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳೆರಡೂ ಒಂದೇ ನೀತಿಯನ್ನು ಅನುಸರಿಸುತ್ತಿವೆ.

ಈಗ ನಮ್ಮ ಮುಂದಿರುವ ಒಂದೇ ಮಾರ್ಗವೆಂದರೆ, ನಮ್ಮ ಸಮಾನ ಶತ್ರುವನ್ನು ಗುರುತಿಸುವುದು ಮತ್ತು ಜಾತಿ ವಿರೋಧಿ, ವರ್ಗ ವಿರೋಧಿ ಮತ್ತು ಎಲ್ಲ ಬಗೆಯ ಪ್ರಜಾತಾಂತ್ರಿಕ ಶಕ್ತಿಗಳೂ ಜೊತೆಗೂಡುವುದು. ಇಂದು ದೇಶದ ಪ್ರತಿಯೊಂದು ಪ್ರಜಾತಾಂತ್ರಿಕ ಶಕ್ತಿ ಕೂಡಾ ದಾಳಿಯ ಭೀತಿಯಲ್ಲಿದೆ. ನಾವೆಲ್ಲರೂ ಸಣ್ಣಪುಟ್ಟ ಸೈದ್ಧಾಂತಿಕ ವಿಚಾರಗಳ ಸುತ್ತ ಪ್ರತ್ಯೇಕವಾಗುಳಿಯುವುದನ್ನು ನಿಲ್ಲಿಸಿ ಜೊತೆಗೂಡಿದರೆ, ನಾವೇ ಈ ದೇಶದ ಬಲಶಾಲಿ ಬಹುಸಂಖ್ಯೆಯಾಗುತ್ತೇವೆ; ನಾವೇ ಪ್ರತಿಪಕ್ಷದ ಪಾತ್ರ ವಹಿಸುತ್ತೇವೆ ಮತ್ತು ಬಹುಶಃ ವಿಶಾಲ ಜನಸಮೂಹವನ್ನು ಮುಂದಿನ ದಾಳಿಗಳಿಂದ ಪಾರುಮಾಡಬಹುದು. ಇದಕ್ಕಾಗಿ ನಾವು ಎಲ್ಲ ಬಗೆಯ ವಿಧಾನಗಳನ್ನೂ, ವೇದಿಕೆಗಳನ್ನೂ, ತಂತ್ರಗಳನ್ನೂ ಅನುಸರಿಸಬೇಕಾಗಬಹುದು. ಗೌರಿ ಲಂಕೇಶ್ ಬಹುಶಃ ಒಂಟಿದನಿಯಾದ ಕಾರಣಕ್ಕೆ ಆಕೆಯ ಹತ್ಯೆ ನಡೆದಿರಬಹುದು, ಆದರೆ ನಾವೆಲ್ಲರೂ ಯಾವಾಗ ಜೊತೆಗೂಡಿ ಒಟ್ಟಾಗಿ ಎದ್ದುನಿಲ್ಲುತ್ತೇವೋ ಆಗ ಇಂತಹ ಯಾವ ಬಲಿಗಳೂ ಸಂಭವಿಸಲು ಸಾಧ್ಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...