Homeಮುಖಪುಟಕೇಂದ್ರದ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು; ಕೇಜ್ರಿವಾಲ್‌ ಭೇಟಿ ಮಾಡಿದ ನಿತೀಶ್ ಕುಮಾರ್

ಕೇಂದ್ರದ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು; ಕೇಜ್ರಿವಾಲ್‌ ಭೇಟಿ ಮಾಡಿದ ನಿತೀಶ್ ಕುಮಾರ್

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಟ್ಟಾಗುತ್ತಿರುವ ಭಾಗವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿವಿಲ್ ಲೈನ್ಸ್ ನಿವಾಸಕ್ಕೆ ಭೇಟಿ ನೀಡಿದ ಮಹತ್ವ ಚರ್ಚೆ ನಡೆಸಿದ್ದಾರೆ.

ಈ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜಿವಾಲ್, ”ನಾನು ಇಂದು ನಿತೀಶ್ ಜೀ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಪರವಾಗಿ ಕೇಂದ್ರವು ಸುಪ್ರೀಂಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ತರುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನಾನು ದೆಹಲಿಯ ಜನರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

”ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿದರೆ ರಾಜ್ಯಸಭೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟು ಮಾಡುಬಹುದು. ಅಂತಹದ್ದೇನಾದರೂ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶ ರವಾನಿಸಬಹುದು” ಎಂದು ಕೇಜಿವಾಲ್ ಹೇಳಿದ್ದಾರೆ.

ಕಳೆದ ಬಾರಿ ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿತ್ತೋ ಆ ಎಲ್ಲ ರಾಜ್ಯಗಳಲ್ಲಿ ಒಂದಂದಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಸಹ ಕಾಂಗ್ರೆಸ್ 136 ಸ್ಥಾನ ಪಡೆದು ಅಧಿಕಾರಕ್ಕೆ ಬಂದಿದೆ. ಇದೇರೀತಿ ಹಲವು ಕಡೆಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣವಚನ ಸ್ವೀಕಾರಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಬಿಜೆಪಿಯೇತರ ಕೆಲವು ನಾಯಕರು ಭಾಗವಹಿಸಿದ್ದರು. ಇದರ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಭಾನುವಾರ ಎಎಪಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ.

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಈಗಿನಿಂದಲೇ ಪ್ರತಿಪಕ್ಷಗಳ ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದ್ದು, ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ಮುನ್ನ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ದೆಹಲಿಯಲ್ಲಿರುವ ಬಿಹಾರ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ರಾಷ್ಟ್ರ ರಾಜಕಾರಣದಲ್ಲಿ ದೇಶದ ಹಿತಾಸಕ್ತಿಗಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕುರಿತು ಚರ್ಚಿಸಿದರು.

ಈ ವೇಳೆ ಕರ್ನಾಟಕದ ಉದಾಹರಣೆ ನೀಡಿದ ನಿತಿಶ್ ಕುಮಾರ್, ”ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದೆ. ದೇಶದಲ್ಲಿ ಅದೇ ರೀತಿ ವಿರೋಧ ಪಕ್ಷಗಳು ಒಗ್ಗೂಡಿದರೆ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬಹುದು. ಅದಕ್ಕಾಗಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

ಇನ್ನೇನು 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇದಕ್ಕೂ ಮುನ್ನ ಬಿಜೆಪಿ ವಿರುದ್ಧ ಎಲ್ಲ ವಿರೋಧ ಪಕ್ಷಗಳ ಬಣವನ್ನು ಗಟ್ಟಿಗೊಳಿಸುವ ಉದ್ದೇಶ ಸಂಯುಕ್ತ ಜನತಾ ದಳ (JDU) ಹೊಂದಿದೆ. ಈ ಕಾರಣಕ್ಕೆ ನಾಯಕ ನಿತೀಶ್ ಕುಮಾರ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ರಣತಂತ್ರ ಹೆಣೆಯುತ್ತಿದ್ದಾರೆ. ಅದಕ್ಕಾಗಿ ವಿವಿಧ ಪಕ್ಷಗಳ ನಾಯಕ ಸಹಕಾರ ಕೋರಿದ್ದಾರೆ ಎಂದು ತಿಳಿದು ಬಂದಿದೆ.

”2024ರಲ್ಲಿ ಎದರಾಗಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಂದೊಳ್ಳೆಯ ಅವಕಾಶ ಕೂಡಿ ಬಂದಿದೆ. ಈ ಸಂಬಂಧ ಪ್ರತಿ ಪಕ್ಷಗಳು ಒಂದಾಗಬೇಕಿದೆ” ಎಂದು ಅವರು ಮಾತುಕತೆ ವೇಳೆ ಹೇಳಿದರು.

ಹೊಸ ಸಂಸತ್ತಿನ ಉದ್ಘಾಟನೆ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದು, ”ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ!” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. All Poltical Partys are united it’s ok
    But why you are not calling Assaduddin Owaisi AIMIM?
    Muslim league, ect.
    Who will be destroyed Congress party you are uniting like shared pawar NCP
    mamta Benarji TMC. and much more
    They all are plying with poor peoples

LEAVE A REPLY

Please enter your comment!
Please enter your name here

- Advertisment -

Must Read

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

0
ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ....