Homeಮುಖಪುಟದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ‘ಬಟೇಂಗೆ ತೋ ಕಟೇಂಗೆ’ ಘೋಷಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನ ಹಲವಾರು ನಾಯಕರು ದೇಶವನ್ನು ಒಗ್ಗೂಡಿಸಲು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ ಎಂದು ಶನಿವಾರ ಪ್ರತಿಪಾದಿಸಿದ್ದಾರೆ. ದೇಶ ಒಗ್ಗಟ್ಟಾಗಿ ಇರಬೇಕೆಂದು ಬಯಸುವವರು ಎಂದಿಗೂ ಇಂತಹ ವಿಭಜನೆಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇಶದ ಐಕ್ಯತೆಗಾಗಿ

ನವೆಂಬರ್ 20 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗಿ ಅವರ ಘೋಷಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ, ತೋ ಸೇಫ್ ಹೈ’ ನಡುವೆ ಯಾವುದು ಬೇಕು ಎಂದು ಬಿಜೆಪಿ ನಿರ್ಧರಿಸುವಂತೆ ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಹಿಡಿದಿದ್ದಕ್ಕಾಗಿ ಟೀಕಿಸಿದ್ದ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಅದೇ ರೀತಿಯ ಪ್ರತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ ಚಿತ್ರವನ್ನು ತೋರಿಸಿದರು. ದೇಶದ ಐಕ್ಯತೆಗಾಗಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತ ಗಳಿಸಲು ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ ಅವರು, “ಮೊದಲು ಯಾರ ಘೋಷವಾಕ್ಯವನ್ನು ಅನುಸರಿಸಬೇಕೆಂದು ನೀವೇ ನಿರ್ಧರಿಸಿ. ಯೋಗಿ ಅಥವಾ ಮೋದಿ ಅವರದ್ದೇ?. ಬಿಜೆಪಿ ನಾಯಕರು ಪ್ರಚೋದಿಸುವ ಭಾಷಣಗಳನ್ನು ನೀಡುತ್ತಾರೆ ಮತ್ತು ಸುಳ್ಳುಗಳನ್ನು ಮಾತನಾಡುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಉತ್ತರ ಮಹಾರಾಷ್ಟ್ರ ಜಿಲ್ಲೆಯ ಧುಲೆಯಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ನಡುವೆ ಏಕತೆ ಇರಬೇಕು ಎಂದು ಹೇಳಿದ್ದರು. “ನೆನಪಿಡಿ, ಏಕ್ ಹೈ, ತೋ ಸೇಫ್ ಹೈ (ನಾವು ಒಗ್ಗಟ್ಟಾಗಿದ್ದರೆ ನಾವು ಸುರಕ್ಷಿತರು)” ಎಂದು ಹೇಳಿದ್ದರು.

“ದೇಶವನ್ನು ಒಗ್ಗೂಡಿಸಲು ಹಲವಾರು ದೊಡ್ಡ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ. ಆದರೆ ನೀವು ಮಾತ್ರ ವಿಭಜಿಸುತ್ತೀರಿ ಜೊತೆಗೆ ಇತರರನ್ನು ದೂಷಿಸುತ್ತೀರಿ. ನೀವು ‘ಬಾಟಂಗೆ ತೋ ಕಟೆಂಗೆ’ ಎಂಬ ವಿಭಜನೆಯ ಘೋಷಣೆಗಳನ್ನು ಹೇಳುತ್ತೀರಿ. ದೇಶ ಒಗ್ಗಟ್ಟಾಗಿ ಉಳಿಯಬೇಕು ಎಂದು ಬಯಸುವವರು ಅದನ್ನು ಎಂದಿಗೂ ಮೀರುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

ವಿದರ್ಭದಲ್ಲಿ ಮಹಾ ವಿಕಾಸ್ ಅಘಾಡಿ ಅಲೆ ಇದೆ, ಇಲ್ಲಿ ರಾಜ್ಯದ 288 ಶಾಸಕರ ಪೈಕಿ 62 ಶಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡ ಮಹಾ ವಿಕಾಸ್ ಅಘಾಡಿ ಮೈತ್ರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಗರ ನಕ್ಸಲರನ್ನು ಬೆಂಬಲಿಸುತ್ತದೆ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿದ ಅವರು, “ಸಂವಿಧಾನದ ಪ್ರತಿಯನ್ನು ಕೆಂಪು ಹೊದಿಕೆಯೊಂದಿಗೆ ಪ್ರದರ್ಶಿಸುವುದು ಅಪರಾಧವೇ?” ಎಂದು ಕೇಳಿದ್ದಾರೆ. ಅನೇಕ ಸಾರ್ವಜನಿಕ ಸಭೆಗಳಲ್ಲಿ, ರಾಹುಲ್ ಗಾಂಧಿಯವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುತ್ತಾರೆ. ಈ ಬಗ್ಗೆ ಬಿಜೆಪಿ ತಕರಾರು ತೆಗೆದಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಅದೇ ರೀತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ ಚಿತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ್ದಾರೆ. ಪ್ರಧಾನಿ ಮೋದಿ “ಸುಳ್ಳುಗಳನ್ನು ಹೇಳುತ್ತಾರೆ ಮತ್ತು ಅವುಗಳನ್ನು ಜೋರಾಗಿ ಹೇಳುತ್ತಾರೆ” ಎಂದು ಅವರು ಆರೋಪಿಸಿದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...