Homeಮುಖಪುಟದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ‘ಬಟೇಂಗೆ ತೋ ಕಟೇಂಗೆ’ ಘೋಷಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನ ಹಲವಾರು ನಾಯಕರು ದೇಶವನ್ನು ಒಗ್ಗೂಡಿಸಲು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ ಎಂದು ಶನಿವಾರ ಪ್ರತಿಪಾದಿಸಿದ್ದಾರೆ. ದೇಶ ಒಗ್ಗಟ್ಟಾಗಿ ಇರಬೇಕೆಂದು ಬಯಸುವವರು ಎಂದಿಗೂ ಇಂತಹ ವಿಭಜನೆಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇಶದ ಐಕ್ಯತೆಗಾಗಿ

ನವೆಂಬರ್ 20 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗಿ ಅವರ ಘೋಷಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ, ತೋ ಸೇಫ್ ಹೈ’ ನಡುವೆ ಯಾವುದು ಬೇಕು ಎಂದು ಬಿಜೆಪಿ ನಿರ್ಧರಿಸುವಂತೆ ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಹಿಡಿದಿದ್ದಕ್ಕಾಗಿ ಟೀಕಿಸಿದ್ದ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಅದೇ ರೀತಿಯ ಪ್ರತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ ಚಿತ್ರವನ್ನು ತೋರಿಸಿದರು. ದೇಶದ ಐಕ್ಯತೆಗಾಗಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತ ಗಳಿಸಲು ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ ಅವರು, “ಮೊದಲು ಯಾರ ಘೋಷವಾಕ್ಯವನ್ನು ಅನುಸರಿಸಬೇಕೆಂದು ನೀವೇ ನಿರ್ಧರಿಸಿ. ಯೋಗಿ ಅಥವಾ ಮೋದಿ ಅವರದ್ದೇ?. ಬಿಜೆಪಿ ನಾಯಕರು ಪ್ರಚೋದಿಸುವ ಭಾಷಣಗಳನ್ನು ನೀಡುತ್ತಾರೆ ಮತ್ತು ಸುಳ್ಳುಗಳನ್ನು ಮಾತನಾಡುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಉತ್ತರ ಮಹಾರಾಷ್ಟ್ರ ಜಿಲ್ಲೆಯ ಧುಲೆಯಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ನಡುವೆ ಏಕತೆ ಇರಬೇಕು ಎಂದು ಹೇಳಿದ್ದರು. “ನೆನಪಿಡಿ, ಏಕ್ ಹೈ, ತೋ ಸೇಫ್ ಹೈ (ನಾವು ಒಗ್ಗಟ್ಟಾಗಿದ್ದರೆ ನಾವು ಸುರಕ್ಷಿತರು)” ಎಂದು ಹೇಳಿದ್ದರು.

“ದೇಶವನ್ನು ಒಗ್ಗೂಡಿಸಲು ಹಲವಾರು ದೊಡ್ಡ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ. ಆದರೆ ನೀವು ಮಾತ್ರ ವಿಭಜಿಸುತ್ತೀರಿ ಜೊತೆಗೆ ಇತರರನ್ನು ದೂಷಿಸುತ್ತೀರಿ. ನೀವು ‘ಬಾಟಂಗೆ ತೋ ಕಟೆಂಗೆ’ ಎಂಬ ವಿಭಜನೆಯ ಘೋಷಣೆಗಳನ್ನು ಹೇಳುತ್ತೀರಿ. ದೇಶ ಒಗ್ಗಟ್ಟಾಗಿ ಉಳಿಯಬೇಕು ಎಂದು ಬಯಸುವವರು ಅದನ್ನು ಎಂದಿಗೂ ಮೀರುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

ವಿದರ್ಭದಲ್ಲಿ ಮಹಾ ವಿಕಾಸ್ ಅಘಾಡಿ ಅಲೆ ಇದೆ, ಇಲ್ಲಿ ರಾಜ್ಯದ 288 ಶಾಸಕರ ಪೈಕಿ 62 ಶಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡ ಮಹಾ ವಿಕಾಸ್ ಅಘಾಡಿ ಮೈತ್ರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಗರ ನಕ್ಸಲರನ್ನು ಬೆಂಬಲಿಸುತ್ತದೆ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿದ ಅವರು, “ಸಂವಿಧಾನದ ಪ್ರತಿಯನ್ನು ಕೆಂಪು ಹೊದಿಕೆಯೊಂದಿಗೆ ಪ್ರದರ್ಶಿಸುವುದು ಅಪರಾಧವೇ?” ಎಂದು ಕೇಳಿದ್ದಾರೆ. ಅನೇಕ ಸಾರ್ವಜನಿಕ ಸಭೆಗಳಲ್ಲಿ, ರಾಹುಲ್ ಗಾಂಧಿಯವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುತ್ತಾರೆ. ಈ ಬಗ್ಗೆ ಬಿಜೆಪಿ ತಕರಾರು ತೆಗೆದಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಅದೇ ರೀತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ ಚಿತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ್ದಾರೆ. ಪ್ರಧಾನಿ ಮೋದಿ “ಸುಳ್ಳುಗಳನ್ನು ಹೇಳುತ್ತಾರೆ ಮತ್ತು ಅವುಗಳನ್ನು ಜೋರಾಗಿ ಹೇಳುತ್ತಾರೆ” ಎಂದು ಅವರು ಆರೋಪಿಸಿದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...