Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...