Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...