Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...