Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...