Homeಮುಖಪುಟವಿಶ್ವವಿದ್ಯಾನಿಲಯಗಳ ಅಂತಿಮ ವರ್ಷದ ಪರೀಕ್ಷೆ ರದ್ದತಿ: ಸುಪ್ರೀಂ ನಿಂದ ನಾಳೆ ಮಹತ್ವದ ತೀರ್ಪು!

ವಿಶ್ವವಿದ್ಯಾನಿಲಯಗಳ ಅಂತಿಮ ವರ್ಷದ ಪರೀಕ್ಷೆ ರದ್ದತಿ: ಸುಪ್ರೀಂ ನಿಂದ ನಾಳೆ ಮಹತ್ವದ ತೀರ್ಪು!

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು.

- Advertisement -
- Advertisement -

ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್ ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದರ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ 3 ನ್ಯಾಯಾಧೀಶರ ಪೀಠವು ಬೆಳಿಗ್ಗೆ 10.30 ಕ್ಕೆ ಅದರ ತೀರ್ಪನ್ನು ನೀಡಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ: ಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿವೆ.

ಆದಾಗ್ಯೂ, ಯುಜಿಸಿಯು, ಕೊನೆಯ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಪರೀಕ್ಷೆಗಳನ್ನು ರದ್ದುಗೊಳಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಮಾತ್ರ ಕರೆ ನೀಡಬಹುದು.

“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಕೊನೆಯ ವರ್ಷದ ಪರೀಕ್ಷೆಗಳನ್ನು ನಡೆಸಲು ದೇಶಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸೀಮಿತ ವ್ಯಾಪ್ತಿಯಲ್ಲಿ ತೆರೆಯಲು ಅನುಮತಿ ನೀಡಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಯುಜಿಸಿಯನ್ನು ಬೆಂಬಲಿಸಿ, ಆಗಸ್ಟ್ 13 ರಂದು ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿತ್ತು.


ಇದನ್ನೂ ಓದಿ: ಕೇಂದ್ರ ವಿವಿ ಮತ್ತು ದೆಹಲಿ ವಿವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಗೊಳಿಸಿ: ಕೇಜ್ರಿವಾಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...