Homeಕರ್ನಾಟಕ'ಮುಕ್ತ' ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು 'ಮತೀಯ'ವಾಗಬಾರದು: ಬರಗೂರು ರಾಮಚಂದ್ರಪ್ಪ

‘ಮುಕ್ತ’ ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು ‘ಮತೀಯ’ವಾಗಬಾರದು: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಪ್ರತಿಪಾದಿಸಿದರು.

ನಿನ್ನೆಯಷ್ಟೇ ಭಗವದ್ಗೀತೆ ಕುರಿತ ವಿಚಾರ ಸಂಕಿರಣಕ್ಕಾಗಿ ವಿವಾದ ಉಂಟಾಗಿದ್ದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯಾವುದೇ ವಿಶ್ವವಿದ್ಯಾನಿಲಯ ಮುಕ್ತವಾಗಿ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪ ಮಾಡಿದರೂ ವಿನಃ, ಅಂತಿಮವಾಗಿ ಅದು ಮತೀಯವಾಗದೆ ಇರುವಂತಹ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ” ಎಂದು ತಿಳಿದುಕೊಂಡಿದ್ದೇನೆ ಎಂದರು.

“ವಿಶ್ವವಿದ್ಯಾನಿಲಯಗಳು ಅದು ಕೇಳಬೇಕು, ಇದು ಕೇಳಬೇಕು ನಿಜ. ಆದರೆ, ಯಾರು ಸುಂದರವಾದ ಸುಳ್ಳನ್ನು ಹೇಳುತ್ತಾರೋ ಅದನ್ನು ನಂಬಿ ಬಿಡುತ್ತಾರೆ ನಮ್ಮ ಜನ; ಸುಳ್ಳು ಸುಂದರವಾಗಿರುತ್ತೆ. ಸತ್ಯ ಕಠೋರವಾಗಿರುತ್ತದೆ, ಸುಳ್ಳಿಗೆ ಸಾಕ್ಷಿ ಬೇಕಿಲ್ಲ. ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಇದಾಗಿದೆ. ಹಾಗಾಗಿ ವಿಚಾರಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ ಮುಕ್ತವಾಗಿರೋಣ, ಆದರೆ ಅದನ್ನು ಪ್ರತಿಪಾದಿಸುವಲ್ಲಿ ನಮಗೊಂದು ನಿರ್ದಿಷ್ಠತೆ ಇರಬೇಕು. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಿಚಾರಗಳಲ್ಲಿ ಮುಕ್ತವಾಗಿರೋಣ. ಆದರೆ ಇಡೀ ಸಮಾಜ ಮತೀಯವಾಗಿರದಂತೆ ನೋಡಿಕೊಳ್ಳೋಣ” ಎಂದು ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣದ ಕುರಿತು ವಿವಿ ಕುಲಪತಿಗಳು ಪರೋಕ್ಷವಾಗಿ ಕಿವಿಮಾತು ಹೇಳಿದರು.

“ಯಾವುದೇ ವಿಚಾರಗಳ ಬಗ್ಗೆ ನಮಗೆ ನಿರ್ಧಿಷ್ಟವಾದ ನಿಲುವು ಇರಬೇಕಾಗುತ್ತದೆ. ಅನಂತಮೂರ್ತಿ ಅವರೂ ಇದನ್ನೆ ಹೇಳಿದ್ದು, ಬೇರೆಯವರ ವಿಚಾರ ಕೇಳಬಾರದು ಎಂದಲ್ಲ. ಕೇಳುವಾಗ ಸಹ ಮಕ್ಕಳಲ್ಲಿ ಏನು ಪರಿಣಾಮ ಆಗಬಹುದು ಎಂಬುದನ್ನು ಯೋಚಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಶರತ್ ಅನಂತಮೂರ್ತಿ ಅವರನ್ನು ಆಗ್ರಹಿಸಿದರು.

ಸಮಾರಂಭದ ಮುಖ್ಯಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟೀ ನಿರ್ದೇಶಕರಾದ ಅಶೋಕ್ ಎನ್. ಚಲವಾದಿ ಭಾಗವಹಿಸಿದ್ದರು. ಕನ್ನಡ ಭಾರತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುಲಸಚಿವ ಎ. ಎಲ್ ಮಂಜುನಾಥ್, ಪ್ರೋ. ಶ್ರೀಕಂಠಕೂಡಿಗೆ, ಪ್ರೊ. ಸಣ್ಣರಾಮ, ಪ್ರೊ. ಕೇಶವಶರ್ಮ, ಪ್ರೊ. ಕುಮಾರಚಲ್ಯ ಅವರುಗಳನ್ನು ಗೌರವಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...