Homeಮುಖಪುಟಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

- Advertisement -
- Advertisement -

ಕೊರೊನಾದಿಂದಾಗಿ ಜನರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಕೊಲ್ಕತ್ತಾ ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಎಲ್ಲಾ ಸೆಮಿಸ್ಟರ್‌ಗಳ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ಮನ್ನಾ ಮಾಡಿದೆ.

2021-22ರ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಶುಲ್ಕಗಳು, ಬೋಧನಾ ಶುಲ್ಕಗಳು ಮತ್ತು ಪರೀಕ್ಷಾ ಶುಲ್ಕಗಳು ಸೇರಿದಂತೆ ಯಾವುದೇ ಶುಲ್ಕವನ್ನು ವಿಶ್ವವಿದ್ಯಾಲಯವು ಈಗ ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಿದೆ.

ವಿಶ್ವವಿದ್ಯಾಲಯವು ಸೆಮಿಸ್ಟರ್ ಪರೀಕ್ಷೆಗಳ ಅಂಕಪಟ್ಟಿ ಮತ್ತು ಗ್ರೇಡ್ ಶೀಟ್‌ಗಳನ್ನು ಪಡೆಯುವಾಗ ನೀಡಬೇಕಾಗಿದ್ದ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಪಡೆಯಲು ತಮ್ಮ ಬಾಕಿ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ವಿಶ್ವವಿದ್ಯಾನಿಲಯವು ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

“ಪ್ರಸ್ತುತ ದೇಶದಲ್ಲಿರುವ ಕೊರೊನಾ ಸಾಂಕ್ರಾಮಿಕದ ದೃಷ್ಟಿಯಿಂದ, 2021-2022 ರ ವಿವಿಧ ಸೆಮಿಸ್ಟರ್‌ಗಳ ಶೈಕ್ಷಣಿಕ ವರ್ಷದ ಪ್ರವೇಶ ಶುಲ್ಕ, ಬೋಧನಾ ಶುಲ್ಕ ಮತ್ತು ಪರೀಕ್ಷಾ ಶುಲ್ಕಗಳಂತಹ ಎಲ್ಲಾ ಶುಲ್ಕಗಳನ್ನು ವಿಶ್ವವಿದ್ಯಾಲಯವು ಮನ್ನಾ ಮಾಡಿದೆ. ವಿವಿಧ ಸೆಮಿಸ್ಟರ್ ಪರೀಕ್ಷೆಗಳ ಅಂಕಪಟ್ಟಿ/ಗ್ರೇಡ್ ಶೀಟ್‌ಗಳನ್ನು ಪಡೆಯಲು ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ” ವಿಶ್ವವಿದ್ಯಾನಿಲಯದ ಹಂಗಾಮಿ ರಿಜಿಸ್ಟ್ರಾರ್ ದೇಬಾಸಿಸ್ ದಾಸ್ ಅಧಿಸೂಚನೆ ಹೊರಡಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ಸೊನಾಲಿ ಚಕ್ರವರ್ತಿ ಬಂದೋಪಾಧ್ಯಾಯ, “ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

“ನಾವು ವಿದ್ಯಾರ್ಥಿಗಳ ಪರವಾಗಿರಲು ಬಯಸುತ್ತೇವೆ. ಸಾಂಕ್ರಾಮಿಕ ರೋಗದಿಂದಾಗಿ ಅವರ ಅಧ್ಯಯನಗಳು ಯಾವುದೇ ರೀತಿಯಲ್ಲಿ ಪರಿಣಾಮ ಬೀರದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಎಸ್‌ಎಫ್‌ಐ ಸ್ವಾಗತ

ವಿಶ್ವವಿದ್ಯಾಲಯದ ಈ ಕ್ರಮವನ್ನು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸ್ವಾಗತಿಸಿದೆ. “ಕಳೆದ ಒಂದೂವರೆ ವರ್ಷಗಳಲ್ಲಿ, ಅನೇಕ ಕುಟುಂಬಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಈ ನಿರ್ಧಾರದಿಂದ ಅವರಿಗೆ ಸ್ವಲ್ಪ ಸಹಾಯವಾಗುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮೈತ್ರಿಗಳು: ಇಲ್ಲಿಂದ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...