Homeಮುಖಪುಟಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು - ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು – ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

- Advertisement -
- Advertisement -

ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಕಾರ್ಯನಿರ್ವಹಿಸುವ ಸಾವಿರಾರು ನೋಂದಾಯಿತ ಪ್ರಯಾಣಿಕ ಬಸ್‌ಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯನ್ನು, ಗಂಭೀರ ವಿಷಯವೆಂದು ಪರಿಗಣಿಸಿ ಛತ್ತೀಸ್‌ಗಢ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಛತ್ತೀಸ್‌ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ 68,396 ನೋಂದಾಯಿತ ಪ್ರಯಾಣಿಕ ಬಸ್‌ಗಳಲ್ಲಿ ಕೆಲವೇ ಕೆಲವು ಪರವಾನಗಿ ಪಡೆದ ಕಂಡಕ್ಟರ್‌ಗಳನ್ನು ನೇಮಿಸಿಕೊಂಡಿವೆ ಎಂದು ಅರ್ಜಿದಾರರಾದ ವಿನೇಶ್ ಚೋಪ್ರಾ ಅವರು ಪಿಐಎಲ್ ಸಲ್ಲಿಸಿದ್ದಾರೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕ ಬಸ್‌ಗಳು ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಚಲಿಸುತ್ತಿವೆ. ಇದು ಕಾನೂನಿನ ನಿಬಂಧನೆಗಳು ಮತ್ತು ಪ್ರಯಾಣಿಕರು, ಸಾರ್ವಜನಿಕರು ಮತ್ತು ಚಾಲಕರ ಸುರಕ್ಷತೆಗೆ ವಿರುದ್ಧವಾಗಿದೆ. ವಯಸ್ಸಾದ ನಾಗರಿಕರು, ಮಕ್ಕಳು, ಮಹಿಳೆಯರು, ಅನಾರೋಗ್ಯ ಪೀಡಿತರು ಮತ್ತು ಇತರ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ. ಅವರ ಸುರಕ್ಷತೆ ಮತ್ತು ಅನುಕೂಲಕರ ಪ್ರಯಾಣ ಅತ್ಯಗತ್ಯ ವಿಚಾರವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಕಳವಳವನ್ನು ಕೇಳಿದ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ರವೀಂದ್ರ ಕುಮಾರ್ ಅಗರ್ವಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ರಾಜ್ಯದಲ್ಲಿ ಕಂಡಕ್ಟರ್/ಪರವಾನಗಿ ಕಂಡಕ್ಟರ್‌ಗಳಿಲ್ಲದೆ ಪ್ರಯಾಣಿಕರ ಬಸ್‌ಗಳು/ಸ್ಟೇಜ್ ಕ್ಯಾರೇಜ್‌ಗಳು ಕಾರ್ಯನಿರ್ವಹಿಸುತ್ತಿರುವ ಸಮಸ್ಯೆಯನ್ನು ಪಿಐಎಲ್‌ನಲ್ಲಿ ಅರ್ಜಿದಾರರು ಪ್ರಸ್ತಾಪಿಸಿದ್ದಾರೆ. ಪರವಾನಗಿ ಕಂಡಕ್ಟರ್ ಪಾತ್ರವನ್ನು 1988 ರ ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನ ನಿಯಮದಲ್ಲಿ ವಿವರಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರವಾನಗಿ ಪಡೆದ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಯಾರೂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದ್ದು ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 29, ಮಾನ್ಯ ಕಂಡಕ್ಟರ್ ಪರವಾನಗಿ ಹೊಂದಿರುವ ಜನರು ಮಾತ್ರ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಬಹುದು. ಈ ಪರವಾನಗಿ ಇಲ್ಲದ ಯಾರನ್ನಾದರೂ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಲು ಯಾರಾದರೂ ನೇಮಿಸಿಕೊಳ್ಳುವುದು ಕಾನೂನುಬಾಹಿರ ಎಂದು ಹೇಳುತ್ತದೆ.

ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ಫ್ಲೈಯಿಂಗ್ ಸ್ಕ್ವಾಡ್‌ಗೆ ಈ ಬಗ್ಗೆ ಪರಿಶೀಲನೆ ನಡೆಸಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಜೊತೆಗೆ ಪರವಾನಗಿ ಪಡೆದ ಕಂಡಕ್ಟರ್ ಇಲ್ಲದೆ ಯಾವುದೇ ಪ್ರಯಾಣಿಕ ಬಸ್ / ಸ್ಟೇಜ್ ಕ್ಯಾರೇಜ್ ರಸ್ತೆಯಲ್ಲಿ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಯಿಂಟ್‌ಗಳನ್ನು ಪರಿಶೀಲಿಸುವಂತೆ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

“ಮಾಹಿತಿ ಹಕ್ಕಿನ ಅಡಿಯಲ್ಲಿ, ರಾಜಧಾನಿ ರಾಯ್‌ಪುರದಲ್ಲಿ 16321 ಬಸ್‌ಗಳಲ್ಲಿ ಕೇವಲ 21 ಪರವಾನಗಿ ಪಡೆದ ಕಂಡಕ್ಟರ್‌ಗಳು ಮತ್ತು ರಾಯ್‌ಗಢದಲ್ಲಿ 5992 ಬಸ್‌ಗಳಿಗೆ 41 ಪರವಾನಗಿ ಪಡೆದ ಕಂಡಕ್ಟರ್‌ಗಳಿದ್ದಾರೆ ಎಂದು ನಮಗೆ ತಿಳಿದುಬಂದಿದೆ. ಈ ಎರಡು ಪ್ರಮುಖ ಜಿಲ್ಲೆಗಳೆ ಇಂತಹ ದಯನೀಯ ಪರಿಸ್ಥಿತಿಯನ್ನು ಹೊಂದಿರುವಾಗ, ಇಡೀ ರಾಜ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅರ್ಜಿದಾರರ ವಕೀಲ ರಿಷಬ್ ಬಿಸೆನ್ ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...