Homeಮುಖಪುಟಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು - ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು – ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

- Advertisement -
- Advertisement -

ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಕಾರ್ಯನಿರ್ವಹಿಸುವ ಸಾವಿರಾರು ನೋಂದಾಯಿತ ಪ್ರಯಾಣಿಕ ಬಸ್‌ಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯನ್ನು, ಗಂಭೀರ ವಿಷಯವೆಂದು ಪರಿಗಣಿಸಿ ಛತ್ತೀಸ್‌ಗಢ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಛತ್ತೀಸ್‌ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ 68,396 ನೋಂದಾಯಿತ ಪ್ರಯಾಣಿಕ ಬಸ್‌ಗಳಲ್ಲಿ ಕೆಲವೇ ಕೆಲವು ಪರವಾನಗಿ ಪಡೆದ ಕಂಡಕ್ಟರ್‌ಗಳನ್ನು ನೇಮಿಸಿಕೊಂಡಿವೆ ಎಂದು ಅರ್ಜಿದಾರರಾದ ವಿನೇಶ್ ಚೋಪ್ರಾ ಅವರು ಪಿಐಎಲ್ ಸಲ್ಲಿಸಿದ್ದಾರೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕ ಬಸ್‌ಗಳು ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಚಲಿಸುತ್ತಿವೆ. ಇದು ಕಾನೂನಿನ ನಿಬಂಧನೆಗಳು ಮತ್ತು ಪ್ರಯಾಣಿಕರು, ಸಾರ್ವಜನಿಕರು ಮತ್ತು ಚಾಲಕರ ಸುರಕ್ಷತೆಗೆ ವಿರುದ್ಧವಾಗಿದೆ. ವಯಸ್ಸಾದ ನಾಗರಿಕರು, ಮಕ್ಕಳು, ಮಹಿಳೆಯರು, ಅನಾರೋಗ್ಯ ಪೀಡಿತರು ಮತ್ತು ಇತರ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ. ಅವರ ಸುರಕ್ಷತೆ ಮತ್ತು ಅನುಕೂಲಕರ ಪ್ರಯಾಣ ಅತ್ಯಗತ್ಯ ವಿಚಾರವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಕಳವಳವನ್ನು ಕೇಳಿದ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ರವೀಂದ್ರ ಕುಮಾರ್ ಅಗರ್ವಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ರಾಜ್ಯದಲ್ಲಿ ಕಂಡಕ್ಟರ್/ಪರವಾನಗಿ ಕಂಡಕ್ಟರ್‌ಗಳಿಲ್ಲದೆ ಪ್ರಯಾಣಿಕರ ಬಸ್‌ಗಳು/ಸ್ಟೇಜ್ ಕ್ಯಾರೇಜ್‌ಗಳು ಕಾರ್ಯನಿರ್ವಹಿಸುತ್ತಿರುವ ಸಮಸ್ಯೆಯನ್ನು ಪಿಐಎಲ್‌ನಲ್ಲಿ ಅರ್ಜಿದಾರರು ಪ್ರಸ್ತಾಪಿಸಿದ್ದಾರೆ. ಪರವಾನಗಿ ಕಂಡಕ್ಟರ್ ಪಾತ್ರವನ್ನು 1988 ರ ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನ ನಿಯಮದಲ್ಲಿ ವಿವರಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರವಾನಗಿ ಪಡೆದ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಯಾರೂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದ್ದು ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 29, ಮಾನ್ಯ ಕಂಡಕ್ಟರ್ ಪರವಾನಗಿ ಹೊಂದಿರುವ ಜನರು ಮಾತ್ರ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಬಹುದು. ಈ ಪರವಾನಗಿ ಇಲ್ಲದ ಯಾರನ್ನಾದರೂ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಲು ಯಾರಾದರೂ ನೇಮಿಸಿಕೊಳ್ಳುವುದು ಕಾನೂನುಬಾಹಿರ ಎಂದು ಹೇಳುತ್ತದೆ.

ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ಫ್ಲೈಯಿಂಗ್ ಸ್ಕ್ವಾಡ್‌ಗೆ ಈ ಬಗ್ಗೆ ಪರಿಶೀಲನೆ ನಡೆಸಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಜೊತೆಗೆ ಪರವಾನಗಿ ಪಡೆದ ಕಂಡಕ್ಟರ್ ಇಲ್ಲದೆ ಯಾವುದೇ ಪ್ರಯಾಣಿಕ ಬಸ್ / ಸ್ಟೇಜ್ ಕ್ಯಾರೇಜ್ ರಸ್ತೆಯಲ್ಲಿ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಯಿಂಟ್‌ಗಳನ್ನು ಪರಿಶೀಲಿಸುವಂತೆ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

“ಮಾಹಿತಿ ಹಕ್ಕಿನ ಅಡಿಯಲ್ಲಿ, ರಾಜಧಾನಿ ರಾಯ್‌ಪುರದಲ್ಲಿ 16321 ಬಸ್‌ಗಳಲ್ಲಿ ಕೇವಲ 21 ಪರವಾನಗಿ ಪಡೆದ ಕಂಡಕ್ಟರ್‌ಗಳು ಮತ್ತು ರಾಯ್‌ಗಢದಲ್ಲಿ 5992 ಬಸ್‌ಗಳಿಗೆ 41 ಪರವಾನಗಿ ಪಡೆದ ಕಂಡಕ್ಟರ್‌ಗಳಿದ್ದಾರೆ ಎಂದು ನಮಗೆ ತಿಳಿದುಬಂದಿದೆ. ಈ ಎರಡು ಪ್ರಮುಖ ಜಿಲ್ಲೆಗಳೆ ಇಂತಹ ದಯನೀಯ ಪರಿಸ್ಥಿತಿಯನ್ನು ಹೊಂದಿರುವಾಗ, ಇಡೀ ರಾಜ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅರ್ಜಿದಾರರ ವಕೀಲ ರಿಷಬ್ ಬಿಸೆನ್ ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...