Homeಮುಖಪುಟಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು - ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು – ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

- Advertisement -
- Advertisement -

ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಕಾರ್ಯನಿರ್ವಹಿಸುವ ಸಾವಿರಾರು ನೋಂದಾಯಿತ ಪ್ರಯಾಣಿಕ ಬಸ್‌ಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯನ್ನು, ಗಂಭೀರ ವಿಷಯವೆಂದು ಪರಿಗಣಿಸಿ ಛತ್ತೀಸ್‌ಗಢ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಛತ್ತೀಸ್‌ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ 68,396 ನೋಂದಾಯಿತ ಪ್ರಯಾಣಿಕ ಬಸ್‌ಗಳಲ್ಲಿ ಕೆಲವೇ ಕೆಲವು ಪರವಾನಗಿ ಪಡೆದ ಕಂಡಕ್ಟರ್‌ಗಳನ್ನು ನೇಮಿಸಿಕೊಂಡಿವೆ ಎಂದು ಅರ್ಜಿದಾರರಾದ ವಿನೇಶ್ ಚೋಪ್ರಾ ಅವರು ಪಿಐಎಲ್ ಸಲ್ಲಿಸಿದ್ದಾರೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕ ಬಸ್‌ಗಳು ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಚಲಿಸುತ್ತಿವೆ. ಇದು ಕಾನೂನಿನ ನಿಬಂಧನೆಗಳು ಮತ್ತು ಪ್ರಯಾಣಿಕರು, ಸಾರ್ವಜನಿಕರು ಮತ್ತು ಚಾಲಕರ ಸುರಕ್ಷತೆಗೆ ವಿರುದ್ಧವಾಗಿದೆ. ವಯಸ್ಸಾದ ನಾಗರಿಕರು, ಮಕ್ಕಳು, ಮಹಿಳೆಯರು, ಅನಾರೋಗ್ಯ ಪೀಡಿತರು ಮತ್ತು ಇತರ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ. ಅವರ ಸುರಕ್ಷತೆ ಮತ್ತು ಅನುಕೂಲಕರ ಪ್ರಯಾಣ ಅತ್ಯಗತ್ಯ ವಿಚಾರವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಕಳವಳವನ್ನು ಕೇಳಿದ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ರವೀಂದ್ರ ಕುಮಾರ್ ಅಗರ್ವಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ರಾಜ್ಯದಲ್ಲಿ ಕಂಡಕ್ಟರ್/ಪರವಾನಗಿ ಕಂಡಕ್ಟರ್‌ಗಳಿಲ್ಲದೆ ಪ್ರಯಾಣಿಕರ ಬಸ್‌ಗಳು/ಸ್ಟೇಜ್ ಕ್ಯಾರೇಜ್‌ಗಳು ಕಾರ್ಯನಿರ್ವಹಿಸುತ್ತಿರುವ ಸಮಸ್ಯೆಯನ್ನು ಪಿಐಎಲ್‌ನಲ್ಲಿ ಅರ್ಜಿದಾರರು ಪ್ರಸ್ತಾಪಿಸಿದ್ದಾರೆ. ಪರವಾನಗಿ ಕಂಡಕ್ಟರ್ ಪಾತ್ರವನ್ನು 1988 ರ ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನ ನಿಯಮದಲ್ಲಿ ವಿವರಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರವಾನಗಿ ಪಡೆದ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಯಾರೂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದ್ದು ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 29, ಮಾನ್ಯ ಕಂಡಕ್ಟರ್ ಪರವಾನಗಿ ಹೊಂದಿರುವ ಜನರು ಮಾತ್ರ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಬಹುದು. ಈ ಪರವಾನಗಿ ಇಲ್ಲದ ಯಾರನ್ನಾದರೂ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಲು ಯಾರಾದರೂ ನೇಮಿಸಿಕೊಳ್ಳುವುದು ಕಾನೂನುಬಾಹಿರ ಎಂದು ಹೇಳುತ್ತದೆ.

ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ಫ್ಲೈಯಿಂಗ್ ಸ್ಕ್ವಾಡ್‌ಗೆ ಈ ಬಗ್ಗೆ ಪರಿಶೀಲನೆ ನಡೆಸಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಜೊತೆಗೆ ಪರವಾನಗಿ ಪಡೆದ ಕಂಡಕ್ಟರ್ ಇಲ್ಲದೆ ಯಾವುದೇ ಪ್ರಯಾಣಿಕ ಬಸ್ / ಸ್ಟೇಜ್ ಕ್ಯಾರೇಜ್ ರಸ್ತೆಯಲ್ಲಿ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಯಿಂಟ್‌ಗಳನ್ನು ಪರಿಶೀಲಿಸುವಂತೆ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

“ಮಾಹಿತಿ ಹಕ್ಕಿನ ಅಡಿಯಲ್ಲಿ, ರಾಜಧಾನಿ ರಾಯ್‌ಪುರದಲ್ಲಿ 16321 ಬಸ್‌ಗಳಲ್ಲಿ ಕೇವಲ 21 ಪರವಾನಗಿ ಪಡೆದ ಕಂಡಕ್ಟರ್‌ಗಳು ಮತ್ತು ರಾಯ್‌ಗಢದಲ್ಲಿ 5992 ಬಸ್‌ಗಳಿಗೆ 41 ಪರವಾನಗಿ ಪಡೆದ ಕಂಡಕ್ಟರ್‌ಗಳಿದ್ದಾರೆ ಎಂದು ನಮಗೆ ತಿಳಿದುಬಂದಿದೆ. ಈ ಎರಡು ಪ್ರಮುಖ ಜಿಲ್ಲೆಗಳೆ ಇಂತಹ ದಯನೀಯ ಪರಿಸ್ಥಿತಿಯನ್ನು ಹೊಂದಿರುವಾಗ, ಇಡೀ ರಾಜ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅರ್ಜಿದಾರರ ವಕೀಲ ರಿಷಬ್ ಬಿಸೆನ್ ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...