Homeಕರ್ನಾಟಕರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ (ಜೂನ್ 21) ಅನ್‌ಲಾಕ್‌ 2.0  ಜಾರಿಯಾಗುತ್ತಿದ್ದು, ಬಿಎಂಟಿಸಿ, ಕೆಸ್‌ಆರ್‌ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಸರ್ಕಾರಿ ಸಾರಿಗೆಗೆ ಅನುಮತಿ ನೀಡದ ಸರ್ಕಾರ ಅನ್‌ಲಾಕ್‌ ಎರಡನೇ  ಹಂತದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ  ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಬಿಎಂಟಿಸಿಯಲ್ಲಿ 6,400 ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿದೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ. ಬಸ್‌ಗಳಂತೆಯೇ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಕೆಎಸ್ಆರ್​ಟಿಸಿ ಯಲ್ಲಿ 8 ಸಾವಿರ ಬಸ್ಸುಗಳಿವೆ. ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳು ಮಾತ್ರ ರಸ್ತೆಗಿಳಿಸಲು ಅನುಮತಿ ‌‌ನೀಡಲು ನಿರ್ಧಾರ ಮಾಡಲಾಗಿದ್ದು, ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ. ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್ ಓಡಾಟ ನಡೆಸಲ್ಲ ಎನ್ನುವ ಮಾಹಿತಿ ಇದೆ. ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ತೀರಾ ಕಡಿಮೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದ್ದು, ಮೂರು ಸೀಟ್ನಲ್ಲಿ ಇಬ್ಬರು ಹಾಗೂ ಎರಡು ಸೀಟ್ನಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಅನ್‌ಲಾಕ್‌ ಸಡಿಲಿಕೆಗಳನ್ನು ನೀಡಲಾಗಿದೆ.

ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಅನ್​ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅನ್​ಲಾಕ್​ ಕುರಿತು ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿವೆ ಎಂದಿದ್ದಾರೆ.


ಇದನ್ನೂ ಓದಿ: ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...