Homeಕರ್ನಾಟಕರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ (ಜೂನ್ 21) ಅನ್‌ಲಾಕ್‌ 2.0  ಜಾರಿಯಾಗುತ್ತಿದ್ದು, ಬಿಎಂಟಿಸಿ, ಕೆಸ್‌ಆರ್‌ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಸರ್ಕಾರಿ ಸಾರಿಗೆಗೆ ಅನುಮತಿ ನೀಡದ ಸರ್ಕಾರ ಅನ್‌ಲಾಕ್‌ ಎರಡನೇ  ಹಂತದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ  ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಬಿಎಂಟಿಸಿಯಲ್ಲಿ 6,400 ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿದೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ. ಬಸ್‌ಗಳಂತೆಯೇ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಕೆಎಸ್ಆರ್​ಟಿಸಿ ಯಲ್ಲಿ 8 ಸಾವಿರ ಬಸ್ಸುಗಳಿವೆ. ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳು ಮಾತ್ರ ರಸ್ತೆಗಿಳಿಸಲು ಅನುಮತಿ ‌‌ನೀಡಲು ನಿರ್ಧಾರ ಮಾಡಲಾಗಿದ್ದು, ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ. ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್ ಓಡಾಟ ನಡೆಸಲ್ಲ ಎನ್ನುವ ಮಾಹಿತಿ ಇದೆ. ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ತೀರಾ ಕಡಿಮೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದ್ದು, ಮೂರು ಸೀಟ್ನಲ್ಲಿ ಇಬ್ಬರು ಹಾಗೂ ಎರಡು ಸೀಟ್ನಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಅನ್‌ಲಾಕ್‌ ಸಡಿಲಿಕೆಗಳನ್ನು ನೀಡಲಾಗಿದೆ.

ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಅನ್​ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅನ್​ಲಾಕ್​ ಕುರಿತು ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿವೆ ಎಂದಿದ್ದಾರೆ.


ಇದನ್ನೂ ಓದಿ: ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...