Homeಕರ್ನಾಟಕರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ (ಜೂನ್ 21) ಅನ್‌ಲಾಕ್‌ 2.0  ಜಾರಿಯಾಗುತ್ತಿದ್ದು, ಬಿಎಂಟಿಸಿ, ಕೆಸ್‌ಆರ್‌ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಸರ್ಕಾರಿ ಸಾರಿಗೆಗೆ ಅನುಮತಿ ನೀಡದ ಸರ್ಕಾರ ಅನ್‌ಲಾಕ್‌ ಎರಡನೇ  ಹಂತದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ  ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಬಿಎಂಟಿಸಿಯಲ್ಲಿ 6,400 ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿದೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ. ಬಸ್‌ಗಳಂತೆಯೇ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಕೆಎಸ್ಆರ್​ಟಿಸಿ ಯಲ್ಲಿ 8 ಸಾವಿರ ಬಸ್ಸುಗಳಿವೆ. ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳು ಮಾತ್ರ ರಸ್ತೆಗಿಳಿಸಲು ಅನುಮತಿ ‌‌ನೀಡಲು ನಿರ್ಧಾರ ಮಾಡಲಾಗಿದ್ದು, ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ. ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್ ಓಡಾಟ ನಡೆಸಲ್ಲ ಎನ್ನುವ ಮಾಹಿತಿ ಇದೆ. ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ತೀರಾ ಕಡಿಮೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದ್ದು, ಮೂರು ಸೀಟ್ನಲ್ಲಿ ಇಬ್ಬರು ಹಾಗೂ ಎರಡು ಸೀಟ್ನಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಅನ್‌ಲಾಕ್‌ ಸಡಿಲಿಕೆಗಳನ್ನು ನೀಡಲಾಗಿದೆ.

ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಅನ್​ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅನ್​ಲಾಕ್​ ಕುರಿತು ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿವೆ ಎಂದಿದ್ದಾರೆ.


ಇದನ್ನೂ ಓದಿ: ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...