Homeಕರೋನಾ ತಲ್ಲಣಅನ್‌ಲಾಕ್ 3: ಕರ್ಫ್ಯೂ ಅಂತ್ಯ, ಆಗಸ್ಟ್ ತಿಂಗಳು ಶಾಲೆ ಬಂದ್‌; ಜಿಮ್‌, ಯೋಗ ಸಂಸ್ಥೆ ಓಪನ್

ಅನ್‌ಲಾಕ್ 3: ಕರ್ಫ್ಯೂ ಅಂತ್ಯ, ಆಗಸ್ಟ್ ತಿಂಗಳು ಶಾಲೆ ಬಂದ್‌; ಜಿಮ್‌, ಯೋಗ ಸಂಸ್ಥೆ ಓಪನ್

ಹೊಸ ಮಾರ್ಗಸೂಚಿಗಳಲ್ಲಿ, ಶಾಲೆಗಳು, ಕಾಲೇಜುಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಆಗಸ್ಟ್ ಅಂತ್ಯದವರೆಗೆ ಮುಚ್ಚಲ್ಪಟ್ಟಿರುತ್ತದೆ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಅಥವಾ 3 ನೇ ಅನ್‌ಲಾಕ್‌ ಪ್ರಕ್ರಿಯೆಯ ಕಾರ್ಯಸೂಚಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದ್ದು, ರಾತ್ರಿ ಕರ್ಫ್ಯೂವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಕಂಟೈನ್‌ಮೆಂಟ್ ವಲಯಗಳಲ್ಲಿ ಇಲ್ಲದ ಜಿಮ್‌ಗಳು ಮತ್ತು ಯೋಗ ಸಂಸ್ಥೆಗಳನ್ನು ಅನ್‌ಲಾಕ್ 3 ನಲ್ಲಿ ತೆರೆಯಲು ಅನುಮತಿ ನೀಡಲಾಗಿದೆ.

ಆದರೆ ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಾನಗಳು, ಸಿನೆಮಾ ಸಭಾಂಗಣ ಮತ್ತು ದೊಡ್ಡ ಗುಂಪು ಸೇರುವ ಎಲ್ಲ ರೀತಿಯ ಸಭೆಗಳಿಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ಭಾರತವು 15 ಲಕ್ಷಕ್ಕೂ ಹೆಚ್ಚು ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ ಮತ್ತು ದೈನಂದಿನ ಪ್ರಕರಣಗಳ ಹೆಚ್ಚಳವು 50,000 ಕ್ಕೆ ಹತ್ತಿರವಾಗಿದ್ದರಿಂದ ಈ ಪ್ರಕಟಣೆ ಬಂದಿದೆ.

ಹೆಚ್ಚಿನ ರಾಜ್ಯಗಳು, ಅದರಲ್ಲೂ ವಿಶೇಷವಾಗಿ ಪ್ರಕರಣಗಳಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿರುವ ರಾಜ್ಯಗಳಲ್ಲಿ ಕಳೆದ ಒಂದು ತಿಂಗಳಿನಿಂದ ಲಾಕ್‌ಡೌನ್ ವಿಧಿಸಲಾಗಿದೆ.

ಇಂದು ಹೊರಡಿಸಲಾದ ಕೇಂದ್ರದ ಹೊಸ ಮಾರ್ಗಸೂಚಿಗಳಲ್ಲಿ, ಶಾಲೆಗಳು, ಕಾಲೇಜುಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಆಗಸ್ಟ್ ಅಂತ್ಯದವರೆಗೆ ಮುಚ್ಚಲ್ಪಟ್ಟಿರುತ್ತದೆ ಎಂದು ಸರ್ಕಾರ ಹೇಳಿದೆ.

ಮೆಟ್ರೊ ರೈಲು ಕಾರ್ಯಾಚರಣೆಗಳು, ಸಿನೆಮಾ ಹಾಲ್‌ಗಳು, ಈಜು ಕೊಳ, ಮನರಂಜನಾ ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು, ಸಭಾಂಗಣಗಳು ಮತ್ತು ದೊಡ್ಡ ಕೂಟಗಳನ್ನು ಒಳಗೊಂಡಿರುವ ಇತರ ಸ್ಥಳಗಳು ಸಹ ಮುಚ್ಚಲ್ಪಡುತ್ತವೆ.

ಆದಾಗ್ಯೂ, ಸ್ವಾತಂತ್ರ್ಯ ದಿನಾಚರಣೆಯನ್ನು ಸಾಮಾಜಿಕ ಅಂತರದೊಂದಿಗೆ, ಕಠಿಣ ರಕ್ಷಣಾತ್ಮಕ ಕ್ರಮಗಳೊಂದಿಗೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಎಲ್ಲಾ ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಇದರ ವ್ಯಾಪ್ತಿಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರ್ಧರಿಸುತ್ತವೆ.

10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು, ಗರ್ಭಿಣಿಯರು ಮತ್ತು ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯ ಮತ್ತು ಮೂತ್ರಪಿಂಡದ ಕಾಯಿಲೆಗಳು ಸೇರಿದಂತೆ ದೀರ್ಘಕಾಲದ ಕಾಯಿಲೆ ಇರುವವರು ಮನೆಯಲ್ಲೇ ಇರಲು ಸೂಚಿಸಲಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟು 15,31,669 ಪ್ರಕರಣಗಳನ್ನು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ತಿಳಿಸಿದೆ. ಸೋಂಕಿನಿಂದಾಗಿ ಒಟ್ಟು 34,193 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...