Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...