Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...