Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...