Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...